ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ: ಸಚಿವ ಮಧು ಬಂಗಾರಪ್ಪ

Date:

Advertisements
  • ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನಕ್ಕೆ ಶಾಸಕರಿಂದ ಸಲಹೆ
  • ಮಕ್ಕಳಿಗೆ ಯಾವುದೇ ವಿಚಾರ ಹೇರಿಕೆ ಮಾಡುವುದು ಶಿಕ್ಷಣ ಇಲಾಖೆ ಕೆಲಸವಲ್ಲ

ಮಕ್ಕಳ ಸಂಖ್ಯೆ ಕಡಿಮೆ ಇರುವ ಕಡೆ ಶಿಕ್ಷಕರಿಗೆ ಕೆಲಸವೇ ಇಲ್ಲದಂತಾಗಿದೆ. ಮಕ್ಕಳಿಗೂ ಶಾಲಾ ವಾತಾವರಣ ಹಿತಕರವಾಗಿರುವುದಿಲ್ಲ. ಸಾರಿಗೆ ವ್ಯವಸ್ಥೆ ಅನುಕೂಲ ಇರುವ ಕಡೆ ಮಕ್ಕಳ ಸಂಖ್ಯೆ ಇರುವ ಶಾಲೆಗಳನ್ನು ವಿಲೀನ ಮಾಡಿದರೆ ಅನುಕೂಲ ಎಂದು ಶಾಸಕರಿಂದ ಸಲಹೆ ಬಂದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸರ್ಕಾರಿ ಶಾಲೆಗಳ ಬಲವರ್ಧನೆಗೆ ಆದ್ಯತೆ ನೀಡಲಾಗುವುದು. ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಯಾವ ರೀತಿಯ ಶಿಕ್ಷಣ ಬೇಕು. ಅದನ್ನು ಕೊಡುವುದು ನಮ್ಮ ಕೆಲಸ. ವಿಲೀನ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳೊಂದಿಗೂ ಚರ್ಚೆ ಮಾಡುವೆ” ಎಂದರು.

“ಮಕ್ಕಳಿಗೆ ಯಾವುದೇ ವಿಚಾರಗಳನ್ನು ಹೇರಿಕೆ ಮಾಡುವುದು ಶಿಕ್ಷಣ ಇಲಾಖೆ ಕೆಲಸವಲ್ಲ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೆ ಈಗಾಗಲೇ ಆದ್ಯತೆ ನೀಡಲಾಗಿದೆ. ಪಬ್ಲಿಕ್ ಶಾಲೆಗಳನ್ನು ಹೆಚ್ಚಾಗಿ ಆರಂಭಿಸುವ ದಿಸೆಯಲ್ಲಿ ಸರ್ಕಾರ ಹೆಜ್ಜೆ ಇಟ್ಟಿದೆ. ಪ್ರತಿ ಜಿಲ್ಲೆಯ ಪ್ರವಾಸ ಮಾಡುತಿದ್ದು, ಸರ್ಕಾರಿ ಶಾಲೆಗಳ ಮೂಲಸೌಕರ್ಯದ ಬಗ್ಗೆ ವರದಿ ತರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸುವೆ” ಎಂದು ಭರವಸೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸ್ಥಳಾಂತರ ಬೇಡ: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಶಿಕ್ಷಣ ನೀತಿ ಜಾರಿ ವಿಚಾರವಾಗಿ ಮಾತನಾಡಿ, “ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಪ್ರತ್ಯೇಕ ಶಿಕ್ಷಣ ನೀತಿ ಕೆಲಸ ನಡೆಯುತ್ತಿವೆ. ಎನ್.ಇ.ಪಿ ರದ್ದು ಮಾಡುವುದರಿಂದ ಇಲಾಖೆಗೆ ಕೇಂದ್ರದ ಅನುದಾನ ಕೊರತೆ ಆಗಲಿದೆ. ಈ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಲಾಗುವುದು” ಎಂದರು.

“ಡಯೆಟ್‌ನಲ್ಲಿ ಸಂಪನ್ಮೂಲ ವ್ಯಕ್ತಿಗಳ ಸಮರ್ಪಕ ಬಳಕೆ ಮಾಡಿಕೊಳ್ಳಲು ಯೋಜನೆ ರೂಪಿಸಲಾಗುವುದು. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ”ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X