ಬೆಂಗಳೂರು | ಡೇಟಿಂಗ್ ಆ್ಯಪ್ ಬಳಸಿ ಹುಡುಗರಿಂದ ಸುಲಿಗೆ; ಇಬ್ಬರ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜೀವನ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್‌ಗಳ ಮೊರೆ ಹೋಗುತ್ತಿರುವುದು ಹೆಚ್ಚಳವಾಗಿದೆ. ಗುರುತು ಇಲ್ಲದವರ ಜತೆಗೆ ಸಲುಗೆ ಬೆಳೆಸಿ, ಹಣವನ್ನು ಕಳೆದುಕೊಳ್ಳುವಂತಹ ಪ್ರಕರಣಗಳು ಕೆಲವು ದಿನಗಳ ಹಿಂದಿನಿಂದ ಅಧಿಕವಾಗಿವೆ. ಇದೀಗ ಇಬ್ಬರು ಆರೋಪಿಗಳು ಹುಡುಗಿ ಹೆಸರಿನಲ್ಲಿ ಕರೆ ಮಾಡಿ ವಂಚನೆ ಎಸಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಲೊಕ್ಯಾಂಟೋ ಆ್ಯಪ್ ಮೂಲಕ ಇಬ್ಬರು ಆರೋಪಿಗಳು ಹುಡುಗಿಯ ಹೆಸರಿನಲ್ಲಿ ಫೇಕ್‌ ಅಕೌಂಟ್ ಕ್ರಿಯೇಟ್ ಮಾಡಿ ಅಪರಿಚಿತ ಯುವತಿಯ ಫೋಟೋ ಹಾಕುತ್ತಿದ್ದರು. ಈ ಫೇಕ್ ಅಕೌಂಟ್‌ನಿಂದ ಹುಡುಗರಿಗೆ ಮೆಸೇಜ್ ಮಾಡಿ ಸಲುಗೆ ಬೆಳೆಸುತ್ತಿದ್ದರು. ಹುಡುಗರು ಮರುಳಾಗುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ ಅವರಿಗೆ ಭೇಟಿ ಆಗುವಂತೆ ತಿಳಿಸಿ ಲೋಕೇಶನ್ ಕಳಿಸುತ್ತಿದ್ದರು.

ತಾವು ಕಳಿಸಿದ ಲೊಕೇಶನ್‌ಗೆ ಬಂದ ವ್ಯಕ್ತಿ ಲೊಕ್ಯಾಂಟೋ ಆ್ಯಪ್ ಮೂಲಕ ಪರಿಚಿತನಾದವನಾ ಎಂಬ ಬಗ್ಗೆ ಖಾತ್ರಿ ಪಡಿಸಿಕೊಂಡು ಬಳಿಕ ಚಾಕು ತೋರಿಸಿ ಆಟೋದಲ್ಲಿ ಕಿಡ್ನಾಪ್ ಮಾಡುತ್ತಿದ್ದರು. ಅವರಿಂದ ಹಣ ಚಿನ್ನಾಭರಣ ಸುಲಿಗೆ ಮಾಡುವ ಜತೆಗೆ ಗೂಗಲ್ ಪೇ ಮತ್ತು ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ಇವರ ಬಳಿ ಹಣ ಇಲ್ಲದಿದ್ದರೆ ಸ್ನೇಹಿತರಿಗೆ ಕರೆ ಮಾಡಿಸಿ ಅವರಿಂದ ಗೂಗಲ್ ಪೇ, ಫೋನ್ ಪೇ ಕೂಡ ಮಾಡಿಸಿಕೊಳ್ಳುತ್ತಿದ್ದರು. ರಾತ್ರಿಯಿಡಿ ಬಂಧನದಲ್ಲಿ ಇರಿಸುತ್ತಿದ್ದರು. ಈ ಆರೋಪಿಗಳು 15ಕ್ಕೂ ಹೆಚ್ಚು ಜನರಿಗೆ ಹುಡುಗಿ ಹೆಸರಲ್ಲಿ ಮೆಸೇಜ್ ಮಾಡಿ ಅವರನ್ನು ನಿಗದಿತ ಸ್ಥಳಕ್ಕೆ ಕರೆಸಿ ಸುಲಿಗೆ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಖ್ಯಾತ ಕವಿ, ಪದ್ಮಶ್ರೀ ಪುರಸ್ಕೃತ ಜಯಂತ ಮಹಾಪಾತ್ರ ಇನ್ನಿಲ್ಲ

ಇತ್ತೀಚೆಗೆ ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಆರೋಪಿಗಳು ವ್ಯಕ್ತಿಯೊಬ್ಬನನ್ನು ಕರೆಸಿ 60 ಸಾವಿರ ಹಣ ಸುಲಿಗೆ ಮಾಡಿದ್ದರು. ಘಟನೆ ಸಂಬಂಧ ವಂಚನೆಗೊಳಗಾದವರು ದೂರು ನೀಡಿದ ಹಿನ್ನೆಲೆ, ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X