ವಿಜಯನಗರ | ಯುವಜನತೆಗೆ ಅಂಬೇಡ್ಕರ್ ಜೀವನ ಆದರ್ಶ: ಪ್ರೋ. ಚಿನ್ನಸ್ವಾಮಿ ಸೋಸಲೆ

Date:

Advertisements

ವಿದ್ಯಾರ್ಥಿಗಳು, ಶೋಷಿತರು, ಬಡವರು, ದಲಿತರು, ಕೂಲಿಕಾರ್ಮಿಕರು ವಿದ್ಯಾರ್ಥಿ ಯುವಜನರು ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು. ಯುವಜನರಿಗೆ ಮಾನವತಾವಾದಿ ಅಂಬೇಡ್ಕರ್‌ ಅವರ ಜೀವ ಆದರ್ಶವಾಗಬೇಕು ಎಂದು ಪ್ರೋ. ಚಿನ್ನ ಸ್ವಾಮಿ ಸೋಸಲೆ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಹೋಸಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ‘ಅಂಬೇಡ್ಕರ್ ಸ್ವರ್ಧಾತ್ಮಕ ಪರೀಕ್ಷೆ’ಯಲ್ಲಿ ಪರೀಕ್ಷೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಶೋಷಿತರು ಸಾಮಾಜಿಕವಾಗಿ, ವೈಚಾರಿಕವಾಗಿ ಮಾತ್ರವಲ್ಲದೇ ಶೈಕ್ಷಣಿಕವಾಗಿ ಕೂಡ ಪ್ರಗತಿ ಸಾಧಿಸಬೇಕು. ದೇಶದಲ್ಲಿರುವ ಅಸಮಾನತೆ, ಅನಾಗರಿಕತೆ, ಮೌಡ್ಯತೆಯನ್ನು ಧಿಕ್ಕರಿಸಬೇಕು” ಎಂದು ಸಲಹೆ ನೀಡಿದರು.

“ಸಾಮರಸ್ಯದ ಬದುಕು ನಡೆಸಲು ಈ ಶಿಕ್ಷಣ ಅವರಿಗೆ ದಾರಿದೀಪವಾಗಬೇಕು. ಆ ನಿಟ್ಟಿನಲ್ಲಿ ಯುವಜನತೆ, ವಿದ್ಯಾರ್ಥಿಗಳಿಗೆ ಮಾನವತಾವಾದದ ಅಂಬೇಡ್ಕರ್ ಜೀವನ ಆರ್ದಶವಾಗಬೇಕು. ಶಿಕ್ಷಣದ ಮೂಲಕವೇ ಮಹಾ ಚೈತನ್ಯವಾಗಬೇಕು” ಎಂದು ಸೂಚಿಸಿದರು.

Advertisements

ಕಾರ್ಯಕ್ರಮದಲ್ಲಿ ಭೀಮ್ ಆರ್ಮಿ (ಭಾರತ್ ಏಕಾತ್ ಮಿಷನ್) ವಿದ್ಯಾರ್ಥಿ ಘಟಕ ರಾಜ್ಯಾಧ್ಯಕ್ಷ ರಘು ಸಿ ಬಳ್ಳಾರಿ, ಶಂಕ್ರುಕಾಟ್ರಳ್ಳಿ, ಡಿವಿಪಿ ಜಿಲ್ಲಾ ಸಂಚಾಲಕ ಹನುಮೇಶ್, ತಾಲೂಕು ಅಧ್ಯಕ್ಷ ಗೌತಮ್, ಶಿವಕುಮಾರ್ ಛಲವಾದಿ ಮಹಾಸಾಭಾ ಜಿಲ್ಲಾ ಕಾರ್ಯದರ್ಶಿ ಅಜಯ್ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

ಮೈಸೂರು | ಅಣ್ಣಾವ್ರ ಅಭಿನಯದಲ್ಲಿ ಇತಿಹಾಸ ಪುರುಷರ ಕಾಣುವಂತಾಯಿತು; ನಟ ಮಂಡ್ಯ ರಮೇಶ್

ಮೈಸೂರಿನ, ಹೆಬ್ಬಾಳ ಹೊರ ವರ್ತುಲದಲ್ಲಿರುವ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಾಡೋಜ ಡಾ....

Download Eedina App Android / iOS

X