ನೈಜ ಹೋರಾಟಗಾರ ವೇದಿಕೆ ವೆಂಕಟೇಶ್‌ಗೆ ಬೆದರಿಕೆ ಸಂದೇಶ; ರಕ್ಷಣೆ ಒದಗಿಸದ ಪೊಲೀಸರು

Date:

Advertisements

ಸಾಮಾಜಿಕ ಜಾಲತಾಣ ವಾಟ್ಸ್‌ಆಪ್‌ ಮೂಲಕ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಹಾಗಾಗಿ, ಪೊಲೀಸ್‌ ಇಲಾಖೆಯಿಂದ ನನಗೆ ರಕ್ಷಣೆ ಕೊಡಿ ಎಂದು ಸಾಮಾಜಿಕ ಹೋರಾಟಗಾರ, ನೈಜ ಹೋರಾಟಗಾರ ವೇದಿಕೆಯ ಎಚ್‌.ಎಂ ವೆಂಕಟೇಶ್ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಾಟ್ಸ್‌ಆಪ್‌ನಲ್ಲಿ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ವೆಂಕಟೇಶ್‌ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರಿಗೆ ಪತ್ರ ಬರೆದಿರುವ ಅವರು, “ನಾನು ಈ ಹಿಂದೆ ಬಹಳಷ್ಟು ಬಾರಿ ಪೊಲೀಸ್ ಇಲಾಖೆಗೆ ರಕ್ಷಣೆ ಕೋರಿ ಮನವಿ ಸಲ್ಲಿಸುತ್ತಲೇ ಬಂದಿದ್ದೇನೆ. ಗುಪ್ತಚರ ಇಲಾಖೆಯವರು ಎರಡು ಮೂರು ಬಾರಿ ನಮ್ಮ ಮನೆಗೆ ಆಗಮಿಸಿ ಹಲವಾರು ವಿವರಗಳನ್ನು ಕಲೆ ಹಾಕಿ ಹೋಗಿದ್ದಾರೆ” ಎಂದು ಬರೆದಿದ್ದಾರೆ.

“ಮುಖ್ಯಮಂತ್ರಿ ಕಚೇರಿಯಿಂದಲೂ ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ. ಆದರೆ, ಈವರೆಗೂ ನನಗೆ ಯಾವುದೇ ರೀತಿಯ ರಕ್ಷಣೆ ಒದಗಿಸಿಲ್ಲ. ಆಗಸ್ಟ್‌ 27ರಂದು (ಭಾನುವಾರ) ಸಂಜೆ ಒಂದು ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಒಬ್ಬ ವ್ಯಕ್ತಿ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ‘ಏನೆಲ್ಲಾ ಪೋಸ್ಟ್‌ಗಳನ್ನು ಹಾಕುತ್ತೀಯಾ ನಿನ್ನನ್ನು ನಾವು ಗಮನದಲ್ಲಿ ಇಟ್ಟಿದ್ದೇವೆ. ನೀನೊಬ್ಬ ನೀಚ ಇನ್ನು ಮುಂದೆ ಯಾವುದೇ ಪೋಸ್ಟ್‌ಗಳನ್ನು ಹಾಕಿದರೆ ಬಿ ಕೇರ್ ಫುಲ್’ ಎಂದೆಲ್ಲಾ ಬರೆದು ಸಂದೇಶ ಕಳುಹಿಸಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ಈ ವ್ಯಕ್ತಿಯ ಯಾರೆಂದು ಹುಡುಕಿ ಅವನ ಮೇಲೆ ಪ್ರಾರ್ಥಮಿಕ ವರ್ತಮಾನ ವರದಿಯನ್ನು ದಾಖಲಿಸಿ ಅವನ ಮೇಲೆ ಕಾನೂನಿನ ಕ್ರಮವನ್ನು ಜರುಗಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಹಲವಾರು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಮತ್ತು ಸರ್ಕಾರಿ ಜಮೀನುಗಳನ್ನು ಅತಿಕ್ರಮ ಮಾಡಿಕೊಂಡವರ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ. ಜನಪ್ರತಿನಿಧಿಗಳು ತಮ್ಮ ಚರ ಸ್ಥಿರ ಆಸ್ತಿಗಳ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸದೆ, ಆದಾಯಕ್ಕೆ ಮೀರಿದ ಆಸ್ತಿಗಳನ್ನು ಮಾಡುವವರ ವಿರುದ್ಧ ಮತ್ತು ಗ್ರಾಮ ಪಂಚಾಯಿತಿ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಎಲ್ಲರ ಆಸ್ತಿಗಳ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂದು ಹೋರಾಟ ನಡೆಸಿ ಜಯ ಗಳಿಸಿದ್ದೇನೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿನಾಯಿ ಬೊಗಳಿದ್ದಕ್ಕೆ ದಾರಿಹೋಕನ ಮೇಲೆ ಹಲ್ಲೆ; ಆರೋಪಿ ಬಂಧನ

“ಈ ನನ್ನ ಹೋರಾಟದಿಂದ ಕಾರ್ಪೊರೇಷನ್, ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಿಲ್ಲುವವರಿಗೆ ಈ ಆದೇಶದಿಂದ ಬಹಳಷ್ಟು ತೊಂದರೆ ಉಂಟಾಗಿದೆ. ಹೀಗಾಗಿ, ಬಹಳಷ್ಟು ಜನರು ನನ್ನ ಮೇಲೆ ಮತ್ತು ನನ್ನ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ಎಲ್ಲೆಲ್ಲಿ ಸಾಧ್ಯವೊ ಅಲ್ಲೆಲ್ಲ ಹೋರಾಟ ನಿಲ್ಲಿಸುವ ಪ್ರಕ್ರಿಯೆ ನಡೆಸುತ್ತಲೇ ಇದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇದಕ್ಕೆ ಸಂಬಂಧಪಟ್ಟ ಪ್ರತಿಯೊಂದು ದಾಖಲೆಗಳನ್ನು ಪೊಲೀಸ್ ಇಲಾಖೆಗೆ ಈ ಹಿಂದೆಯೇ ಸಲ್ಲಿಸಿದ್ದೇನೆ. ಈ ಎಲ್ಲ ಹಿನ್ನೆಲೆಯಲ್ಲಿ ವಾಟ್ಸ್‌ಆಪ್ ಸಂದೇಶಗಳ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು. ಪೋಲಿಸ್ ರಕ್ಷಣೆಯನ್ನು ಉಚಿತವಾಗಿ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ವಾಟ್ಸ್‌ಆಪ್

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ನೈಜ ಹೋರಾಟಗಾರ ವೇದಿಕೆಯ ಎಚ್‌.ಎಂ. ವೆಂಕಟೇಶ್, “ಈ ಹಿಂದೆಯೂ ಕೂಡ ಹಲವು ಬಾರಿ ಬೆದರಿಕೆ ಸಂದೇಶಗಳು ಬಂದಿವೆ. ಆಗ ಅಷ್ಟೊಂದು ತಲೆಕೆಡಿಸಿಕೊಂಡಿರಲಿಲ್ಲ. ಈಗ ಬೆದರಿಕೆ ಸಂದೇಶ ಕಳುಹಿಸಿರುವ ಅಪರಿಚಿತ ವ್ಯಕ್ತಿಯನ್ನು ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದ್ದೇನೆ ಹಾಗೂ ಪೊಲೀಸ್‌ ಇಲಾಖೆಯಿಂದ ನನಗೆ ರಕ್ಷಣೆ ನೀಡಬೇಕು” ಎಂದು ಕೇಳಿದ್ದೇನೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X