ಮರ್ಯಾದೆಗೇಡು ಹತ್ಯೆ | ಜಾತಿ ವ್ಯವಸ್ಥೆಯ ಹೀನ ಮನಸ್ಥಿತಿಯ ಪ್ರತಿಫಲನ: ಸಿಎಂ ಸಿದ್ದರಾಮಯ್ಯ

Date:

Advertisements
  • ‘ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ’
  • ‘ಜಾತಿಗ್ರಸ್ತ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ’

ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಖಂಡಿಸಿ, ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಿದೆ” ಎಂದು ಭರವಸೆ ನೀಡಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

Advertisements

“ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ” ಎಂದಿದ್ದಾರೆ.

“ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ದೇವರಗುಡಿಯಲ್ಲಿ ಪೂಜೆಮಾಡುವವರನ್ನು ಪಂಗಡಗಳ ಮಂದಿಎಣಿಕೆ ನೆಲೆಗಟ್ಟಿನ ಮೇಲೆ ಮೀಸಲಾತಿ ನೀಡಿ ನೇಮಿಸಿ , ಕನ್ನಡದಲ್ಲಿ ಮಂತ್ರ ಓದಿ ಪೂಜೆಮಾಡುವ ಪದ್ದತಿ ತರುವುದು ಈಗ ಆಗಬೇಕಿದೆ

  2. ತನ್ನ ಮಾತಿನಲ್ಲಿ ಕಲಿಕೆ ಮಾಡದ ನಾಡು ಏಳಿಗೆಕಾಣದೆ ಹಿಂದುಳಿದಿದೆ.ಹಾಗಾಗಿ ಕುರುಡು ನಂಬಿಕೆಗಳಿಂದ ಹೊರಬರಲು ಆಗುತ್ತಿ್ಲ. ಸಂಸ್ಕೃತ ಪದಗಳ ಹೊರೆಯಿಂದ ಕಲಿಕೆಯನ್ನು ಕಗ್ಗಂಟಾಗಿಸಿರುವುದೂ ಇದರಲ್ಲಿ ಒಂದು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X