ಕೊಡಗು | ಮೋದಿಯವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯಲ್ಲ: ಸಚಿವ ಬೋಸರಾಜು

Date:

Advertisements

ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌ ಬೋಸರಾಜು ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ. ಆಪರೇಷನ್ ಎಂಬ ಕೆಟ್ಟ ಶಬ್ದ ತಂದಿದ್ದು ಬಿಜೆಪಿ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಪಕ್ಷ ಸೇರ್ಪಡೆಗೆ ಹಲವು ಹೊಸ ಹೊಸ ಮುಖಗಳ ಹೆಸರುಗಳು ಬರುತ್ತಿದೆ. ಕಲ್ಯಾಣ ಕರ್ನಾಟಕದಲ್ಲೂ ಹಲವರು ನನ್ನ ಸಂಪರ್ಕದಲ್ಲಿದ್ದಾರೆ. ಇಂತಿಷ್ಟೇ ಜನ ಬರುತ್ತಾರೆಂದು ಹೇಳಲಾಗದು. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದೆ. ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ” ಎಂದು ವ್ಯಂಗ್ಯವಾಡಿದರು.

“ಅನೇಕ ಜಿಲ್ಲೆಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಕಾಂಗ್ರೆಸ್ ಸೇರ್ಪಡೆಯಾಗಲ್ಲಿದ್ದಾರೆ. ಅನೇಕ ನಾಯಕರು ಈಗಾಗಲೇ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ, ನಮ್ಮಲ್ಲಿ ಯಾವುದೇ ಆಪರೇಷನ್ ಹಸ್ತ ಎಂಬೂದು ಇಲ್ಲ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಅವರಾಗಿಯೇ ಬರುತ್ತಾರೆ. ಅಂತವರನ್ನು ಪಕ್ಷ ಬರಮಾಡಿಕೊಳ್ಳಲ್ಲಿದೆ” ಎಂದು ಹೇಳಿದರು.

Advertisements

ಹಾನಿಗೊಳಗದ ಜನರಲ್ ತಿಮ್ಮಯ್ಯ ಪ್ರತಿಮೆ ವೀಕ್ಷಣೆ

ಕಳೆದ ಸೋಮವಾರ ಸರ್ಕಾರಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ 50 ವರ್ಷದ ಜನರಲ್‌ ತಿಮ್ಮಯ್ಯ ಪ್ರತಿಮೆಯನ್ನು ಬೋಸರಾಜ್‌ ಪರಿಶೀಲಿಸಿದರು. ಪ್ರತಿನೆಯನ್ನೆ ದುರಸ್ತಿ ಮಾಡಿ ಪುನರ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರಿಯ ರಾಜಕಾರಣಿ ಎಂ.ಸಿ ನಾಣಯ್ಯ ಅವರ ಪರಿಶ್ರಮದಿಂದ 1973ರಲ್ಲಿ ಈ ಪ್ರತಿಮೆ ನಿರ್ಮಿಸಲಾಗಿತ್ತು. ಅದನ್ನು ಉಳಿಸಿಕೊಳ್ಳಬೇಕು ಎಂದು ಸಚಿವರಿಗೆ ಮಡಿಕೇರಿ ಶಾಸಕ ಮಂತರ್ ಗೌಡ ಮನವಿ ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X