ಏಪ್ಯಾ ಕಪ್ 2023 | ಮೊದಲ ಎರಡು ಪಂದ್ಯಗಳಿಂದ ಕೆ ಎಲ್ ರಾಹುಲ್ ಔಟ್!

Date:

Advertisements
  • ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಬಿಸಿಸಿಐ
  • ಬುಧವಾರದಿಂದ ಆರಂಭವಾಗಲಿರುವ ಏಪ್ಯಾ ಕಪ್ ಟೂರ್ನಿ

ಬುಧವಾರದಿಂದ ಪ್ರಾರಂಭವಾಗಲಿರುವ ಮಹತ್ವದ ಏಷ್ಯಾ ಕಪ್‌ ಟೂರ್ನಿಯ ಮೊದಲ ಎರಡು ಪಂದ್ಯಗಳಿಂದ ಭಾರತದ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ಕೆ ಎಲ್ ರಾಹುಲ್ ಹೊರಗುಳಿದಿದ್ದಾರೆ.

ಗಾಯದಿಂದ ಚೇತರಿಸಿಕೊಂಡ ನಂತರ ತಂಡದಲ್ಲಿ ಹೆಸರಿಸಲಾದ 31 ವರ್ಷದ ಕನ್ನಡಿಗ ಕೆ ಎಲ್ ರಾಹುಲ್, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ ಪ್ರಕಟಿಸಿದ್ದಾರೆ.

ಇದಕ್ಕೂ ಮುನ್ನ ತಂಡವನ್ನು ಪ್ರಕಟಿಸುವ ಸಂದರ್ಭದಲ್ಲಿ ಬಿಸಿಸಿಐ ಮುಖ್ಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಕೆ ಎಲ್ ರಾಹುಲ್ ಸಣ್ಣಪುಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದರು.

Advertisements

“ಕೆ ಎಲ್ ರಾಹುಲ್ ನಮ್ಮೊಂದಿಗೆ ಉತ್ತಮವಾಗಿ ಮುನ್ನಡೆಯುತ್ತಿದ್ದಾರೆ. ಆದರೆ ಕ್ಯಾಂಡಿ ಪ್ರವಾಸದ ಮೊದಲ ಭಾಗಕ್ಕೆ ಅವರು ಅಲಭ್ಯರಾಗುತ್ತಾರೆ” ಎಂದು ಪ್ರವಾಸ ಹೊರಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ರಾಹುಲ್ ಟೂರ್ನಿಯಲ್ಲಿ ಭಾಗವಹಿಸುವ ಕುರಿತು ಸೆಪ್ಟೆಂಬರ್ 4 ರಂದು ಕರೆ ನೀಡಲಾಗುವುದು ಎಂದು ದ್ರಾವಿಡ್ ಮಾಹಿತಿ ನೀಡಿದ್ದಾರೆ.

“ಮುಂದಿನ ಕೆಲವು ದಿನಗಳವರೆಗೆ ‘ನ್ಯಾಷನಲ್ ಕ್ರಿಕೆಟ್ ಅಕಾಡೆಮಿ’ ಅವರನ್ನು ನೋಡಿಕೊಳ್ಳುತ್ತದೆ. ಸೆಪ್ಟೆಂಬರ್ 4ರಂದು ಮರುಮೌಲ್ಯಮಾಪನ ಮಾಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಆದರೆ, ಅವರು ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗುತ್ತಾರೆ” ದ್ರಾವಿಡ್ ತಿಳಿಸಿದರು.

ಅಲ್ಲದೇ, ಈ ಬಗ್ಗೆ ಬಿಸಿಸಿಐ ಕೂಡ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ‘ಏಷ್ಯಾ ಕಪ್‌ ಟೂರ್ನಿಯ ಪಾಕಿಸ್ತಾನ ಮತ್ತು ನೇಪಾಳ ವಿರುದ್ಧ ಕೆ ಎಲ್ ರಾಹುಲ್ ಲಭ್ಯವಿರುವುದಿಲ್ಲ’ ಎಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಮೀಸಲು ಆಟಗಾರನಾಗಿ ಪ್ರವಾಸಗೈಯಲಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಏಷ್ಯಾ ಕಪ್‌ನ ಮೊದಲ ಪಂದ್ಯವು ಬುಧವಾರ ಮುಲ್ತಾನ್‌ನಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ನಡೆಯಲಿದೆ.

ಟೀಂ ಇಂಡಿಯಾ ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X