ರಾಯಚೂರು | ಟಿಪ್ಪರ್‌ಗಳ ಹಾವಳಿ ತಡೆಯುವಂತೆ ಆಗ್ರಹ

Date:

Advertisements

ರಾಯಚೂರು ನಗರದಲ್ಲಿ ಟಿಪ್ಪರ್ ಮತ್ತು ಟ್ರ‍್ಯಾಕ್ಟರಗಳು ಅತೀ ವೇಗದಿಂದ ಓಡಾಡುತ್ತಿರುವುದನ್ನು ನಿಯಂತ್ರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ನಗರದ ಸುತ್ತ-ಮುತ್ತಲಿನ ಅರಣ್ಯ ಮತ್ತು ಸರ್ಕಾರದ ಗೈರಾಣಿ ಭೂಮಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ದಂಧೆ ನಡೆಯುತ್ತಿದೆ. ಕೆಲ ಭೂಮಾಫೀಯ ದಂದೆಕೋರರು ಅಕ್ರಮ ಕೂಟ ರಚನೆ ಮಾಡಿಕೊಂಡು ಸರ್ಕಾರಕ್ಕೆ ಪೆನಾಲ್ಟಿ ಕಟ್ಟದೆ ಸರ್ಕಾರ ಖನಿಜ ಸಂಪತ್ತು ಮರಳನ್ನು ಅಕ್ರಮವಾಗಿ ಕಳ್ಳ ಸಾಗಾಣೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

“5 ರಂದ 10 ಟಿಪ್ಪರುಗಳನ್ನು ಇಟ್ಟುಕೊಂಡು ಕೆಲವರು ಮರಳು ಮತ್ತು ಜಲ್ಲಿಯನ್ನು ಓವರ್ ಲೋಡ್ ಹಾಕಿಕೊಂಡು ಸಾಗಿಸುತ್ತಿದ್ದಾರೆ. ಇದರಿಂದ ರಸ್ತೆಗಳು ಹಾಳಾಗುತ್ತಿವೆ. ಅಲ್ಲದೆ, ವಾಹನಗಳು ವೇಗವಾಗಿ ಹೋಗುತ್ತಿರುವುದರಿಂದ ಬೈಕ್ ಸವಾರರಿಗೆ ಮತ್ತು ನಡೆದಾಡುವ ಸಾರ್ವಜನಿಕರಿಗೆ ಕಣ್ಣಲ್ಲಿ ಧೂಳು ಬಿದ್ದು, ರಸ್ತೆ ಅಘಾತಗಳು ಸಂಭವಿಸುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಸಾರಿಗೆ ಅಧಿಕಾರಿಗಳು ಕೂಡ ಕಳ್ಳ ಧಂದೆಕೋರರ ಜೊತೆ ಶಾಮೀಲಾಗಿದ್ದು, ಅಕ್ರಮಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ತಿಮ್ಮಪ್ಪ ಸ್ವಾಮಿ, ಕಾರ್ಯಾದ್ಯಕ್ಷ ನರಸಿಂಹಲು, ವಿಭಾಗೀಯ ಅಧ್ಯಕ್ಷ ಪ್ರಕಾಶ ಕುಮಾರ, ವಿ.ಎಸ್. ಯಲ್ಲಪ್ಪ, ನವೀನ್ ಕುಮಾರ, ಗೋವಿಂದ, ಸಿದ್ದಪ್ಪ, ನರಸಿಂಹಲು ಸೇರಿದಂತೆ ಅನೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X