ದಕ್ಷಿಣ ಕನ್ನಡ | ತೂಗು ಸೇತುವೆ ನಿರ್ಮಿಸಲು ಆಗ್ರಹ; ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ

Date:

Advertisements
  • 40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶ
  • ಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆ

ಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು ಕಾರ್ಯರೂಪಕ್ಕೆ ತರದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಂತ್ರಸ್ಥರು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬ್ಯಾನರ್‌ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆಯ ಎಂಬಲ್ಲಿ ಸುಳ್ಯ ಕಡೆ ಹರಿದು ಬರುವ ಹೊಳೆಗೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಇಲ್ಲಿನ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸ್ಥಳೀಯ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದರು.

ಅಂಬೇಡ್ಕರ್ ರಕ್ಷಣಾ ಸಮಿತಿಯ ಅಧ್ಯಕ್ಷ ಸುಂದರ ಪಾಟಾಜೆ ಮಾತನಾಡಿ, “ಇಲ್ಲಿನ ದಾರಿಯನ್ನು ಅವಲಂಭಿಸಿಕೊಂಡು 40ಕ್ಕೂ ಹೆಚ್ಚು ದಲಿತ ಕುಟುಂಬಗಳಿದ್ದು, ಇವರ ಸಮಸ್ಯೆ ಪರಿಹರಿಸಲು ಇದುವರೆಗೂ ಯಾವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿಲ್ಲ. ಈ ಭಾಗದ ಗರ್ಭಿಣಿಯರು ಆಸ್ಪತ್ರೆಗೆ ಹೋಗಲು, ಮಹಿಳೆಯರು ಅಂಗಡಿಗೆ ಹೋಗಲು, ವಿದ್ಯಾರ್ಥಿಗಳು ಶಾಲೆಗೆ ಹೋಗಲು ಪರದಾಡುವಂತಾಗಿದೆ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

Advertisements
ಸುಳ್ಯ 02
ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆಯ ಎಂಬಲ್ಲಿ ಸುಳ್ಯ ಕಡೆ ಹರಿದು ಬರುವ ಹೊಳೆಗೆ ನಿರ್ಮಿಸಿರುವ ತಾತ್ಕಾಲಿಕ ತುಗು ಸೇತುವೆ

ತಮ್ಮ ಸಮಸ್ಯೆ ಬಗೆಹರಿಸುವಂತೆ ಅಂಬೇಡ್ಕರ್ ರಕ್ಷಣಾ ಸಮಿತಿ ನೇತೃತ್ವದಲ್ಲಿ ಇಲ್ಲಿನ ನಿವಾಸಿಗಳು ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಸಂಸದರಿಗೆ ಹಾಗೂ 40 ವರ್ಷಗಳಿಂದ ಶಾಸಕರಾಗಿರುವ ಹಾಲಿ ಸಚಿವರಾ ಎಸ್ ಅಂಗಾರ ಅವರಿಗೆ ತಮ್ಮ ಸಮಸ್ಯೆ ಮನವರಿಕೆ ಮಾಡಿಕೊಟ್ಟರು ಸ್ಪಂದಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? : ಗದಗ | ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಸಮಸ್ಯೆ ಬಗೆಹರಿಸುವಂತೆ ಮನವಿ

ಅರಂತೋಡು ಗ್ರಾಮ ಪಂಚಾಯಿತಿ ವತಿಯಿಂದ ತಾತ್ಕಾಲಿಕವಾಗಿ ಸಂಚಾರಿಸಲು ತೂಗು ಸೇತುವೆ ನಿರ್ಮಿಸಿಕೊಡಲಾಗಿದೆ. ಆದರೆ, ಈ ತೂಗು ಸೇತುವೆಯು ಸಾಮಾನ್ಯ ಸೇತುವೆಯಾಗಿದ್ದು, ಎರಡು ಕಡೆಗಳಲ್ಲಿ ಪಿಲ್ಲರ್‌ಗಳಿಲ್ಲದೇ ಮರಗಳಿಗೆ ನೇತು ಹಾಕಲಾಗಿದೆ. ಈ ತಾತ್ಕಾಲಿಕ ತೂಗು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಈ ಸೇತುವೆ ಮೇಲೆ ಹೊಳೆ ದಾಟುವುದು ಅಪಾಯಕಾರಿಯಾಗಿದೆ. ಇದರಿಂದ ಈ ಭಾಗದ ಜನರು ನಿತ್ಯ ಸಮಸ್ಯೆ ಸಮಸ್ಯೆ ಅನುಭವಿಸುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕಾರಣಿಗಳು ಚುನಾವಣೆಯಲ್ಲಿ ಗೆದ್ದ ಬಳಿಕ ಗ್ರಾಮಗಳ ಸಮಸ್ಯೆಗಳತ್ತ ಗಮನಹರಿಸದಿರುವುದರಿಂದ ಇಲ್ಲಿನ ನಿವಾಸಿಗಳು ಚುನಾವಣೆ ಬಹಿಷ್ಕರಿಸುವುದಾಗಿ ತೀರ್ಮಾನಿಸಿ, ಗ್ರಾಮದ ಹಲವೆಡೆ ಬ್ಯಾನರ್ ಅಳವಡಿಸಿ, ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X