ದಲಿತ ಪ್ರಾಧ್ಯಾಪಕಿ ಮೇಲೆ ಸಹೋದ್ಯೋಗಿ ಮತ್ತು ವಿದ್ಯಾರ್ಥಿಗಳಿಂದ ಹಲ್ಲೆ- ಜಾತಿ ದೌರ್ಜನ್ಯ; ಆರೋಪ

Date:

Advertisements

ತಮ್ಮ ಇಬ್ಬರು ಸಹೋದ್ಯೋಗಿ ಪ್ರಾಧ್ಯಾಪಕರು ಮತ್ತು ಇಬ್ಬರು ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿದ್ದಾರೆ ಎಂದು ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದಲಿತ ಸಹಾಯಕ ಪ್ರಾಧ್ಯಾಪಕಿ ಒಬ್ಬರು ಆರೋಪಿಸಿದ್ದಾರೆ.

ಮೂರು ತಿಂಗಳ ಹಿಂದೆಯೇ ಘಟನೆ ನಡೆದಿದೆ. ಅಂದೇ ಪ್ರಾಧ್ಯಾಪಕಿಯು ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಬರೋಬ್ಬರಿ ಮೂರು ತಿಂಗಳ ನಂತರ ಆಗಸ್ಟ್‌ 27ರಂದು ಎಫ್‌ಐಆರ್‌ ದಾಖಲಾಗಿದೆ. ಆದೂ, ಆಕೆ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದೂರುದಾರ ಪ್ರಾಧ್ಯಾಪಕಿ ಆರೋಪಿಸಿದ್ದಾರೆ.

“ನಾನು ದಲಿತೆ ಎಂಬ ಕಾರಣಕ್ಕೆ ಆರೋಪಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದರು. ನನ್ನನ್ನು ಹುದ್ದೆಯಿಂದ ತೆಗೆದು ಹಾಕುವಂತೆ ಒತ್ತಡ ಹಾಕಿದ್ದರು. ಅವರ ಒತ್ತದ ಹೊರತಾಗಿಯೂ ನಾನು ನನ್ನ ಹುದ್ದೆಯನ್ನು ಉಳಿಸಿಕೊಂಡಿದ್ದೇನೆ. ಆಗಿನಿಂದ, ನನ್ನ ಮೇಲೆ ಆರೋಪಿಗಳು ವೈಷಮ್ಯ ಹೆಚ್ಚಿಕೊಂಡು, ಹಲ್ಲೆ ಮಾಡಿದ್ದರು” ಎಂದು ದೂರುದಾರರು ತಿಳಿಸಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಶ್ವವಿದ್ಯಾಲಯದ ಸುತ್ತ ಸುತ್ತವಂತೆ ಮಾಡಬೇಕೆಂದು ಮಾತಾನಾಡಿಕೊಂಡಿದ್ದರು. ಮೇ 22ರಂದು ಆರೋಪಿಗಳಲ್ಲಿ ಒಬ್ಬರು ಆಕೆಯ ಬೇಂಬರ್‌ಗೆ ನುಗ್ಗಿ, ಹುದ್ದೆಯಿಂದ ತೆಗೆದು ಹಾಕಿಸುವುದಾಗಿ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಅಂದು ಆರೋಪಿಯೊಬ್ಬ ನನ್ನ ಚೇಂಬರ್‌ನಲ್ಲಿ ಗಲಾಟೆ ಮಾಡಿದ್ದರಿಂದ ನಾನು ಕೊಠಡಿಯಿಂದ ಹೊರ ಬಂದೆ. ಅಲ್ಲಿ ಇತರ ಆರೋಪಿಗಳು ಕೊಠಡಿಯ ಬಾಗಿಲು ಮುಚ್ಚಿದರು. ಒಬ್ಬ ನನ್ನನ್ನು ಹಿಡಿದುಕೊಂಡು ನನ್ನ ಬಟ್ಟೆಗಳನ್ನು ಹರಿದು ಹಾಕಿದ. ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದ” ಎಂದು ಪ್ರಾಧ್ಯಾಪಕಿ ಅರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉ. ಪ್ರದೇಶ | ಮುಸ್ಲಿಂ ಪ್ರಯಾಣಿಕರ ನಮಾಝ್‌ಗೆ ಅವಕಾಶ ನೀಡಿ ಅಮಾನತಾಗಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ

ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 342 (ತಪ್ಪಾದ ಬಂಧನ), 354-ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಆರೋಪಗಳು ಆಧಾರರಹಿತವೆಂದು ಹೇಳಿದ್ದಾರೆ. “ಆಕೆ ಇತರರ ವಿರುದ್ಧವೂ ಇದೇ ರೀತಿಯ ದೂರುಗಳನ್ನು ದಾಖಲಿಸಿದ್ದಾರೆ” ಎಂದು ಆರೋಪಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X