ಬೀದರ್‌ | ನೂಲಿಯ ಚಂದಯ್ಯ – ನಾಡು ಕಂಡ ಶ್ರೇಷ್ಠ ಕಾಯಕ ಯೋಗಿ: ಡಾ. ಮನ್ಮಥ ಡೋಳೆ

Date:

Advertisements

ಶರಣ ನೂಲಿಯ ಚಂದಯ್ಯ ಅವರು ಕನ್ನಡ ನಾಡು ಕಂಡ ಶ್ರೇಷ್ಠ ಕಾಯಕ ಯೋಗಿಯಾಗಿದ್ದರು ಎಂದು ನಾಲಂದಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ. ಮನ್ಮಥ ಡೋಳೆ ನುಡಿದರು.

ಔರಾದ ತಾಲೂಕು ಆಡಳಿತವು ಆಯೋಜಿಸಿದ್ದ ಶರಣ ನೂಲಿಯ ಚಂದಯ್ಯ ಹಾಗೂ ನಾರಾಯಣ ಗುರು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಕಾಯಕ ದಾಸೋಹ ಮೈಗೂಡಿಸಿಕೊಂಡ ಶರಣ ನೂಲಿ ಚಂದಯ್ಯನವರ 48 ವಚನಗಳು ಲಭ್ಯವಿದ್ದು, ಪ್ರತಿಯೊಂದು ಮನುಕುಲಕ್ಕೆ ಅವಶ್ಯಕ ಸಂದೇಶಗಳು ಸಾರುತ್ತವೆ” ಎಂದರು.

ಮುಖಂಡ ಡಾ. ಭೀಮಸೆನ್ ಸಿಂಧೆ ಮಾತನಾಡಿ, “ಸಾಮಾಜಿಕ ನ್ಯಾಯಕ್ಕಾಗಿ ಅನೇಕ ಮಹಾತ್ಮರು, ಶರಣರು, ದಾಸರು ಕೆಲಸ ಮಾಡಿದ್ದು, ಚಂದಯ್ಯನವರು ಇದೇ ಸಾಲಿಗೆ ಸೇರುತ್ತಾರೆ” ಎಂದರು.

Advertisements

ತಾಲೂಕು ಕೋರಮಾ ಸಮಾಜದ ಅಧ್ಯಕ್ಷ ಧನರಾಜ ಮಾನೆ ಮಾತನಾಡಿ, “ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಮುದಾಯ ಮುನ್ನೆಲೆಗೆ ಬರಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎಲ್ಲದರಲ್ಲೂ ಗುಣಾತ್ಮಕತೆ ಕಾಣುವ ಮನೋಭಾವ ಬೆಳೆಯಬೇಕು: ಪ್ರೊ. ವಿಕ್ರಮ ವಿಸಾಜಿ

ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ನರಸಪ್ಪ,ಪ್ರಮುಖರಾದ ರಾಮಣ್ಣ ವಡಿಯಾರ್, ನಾಗನಾಥ ಸಾಡಂಗಲೆ, ಡಾ. ವೈಜಿನಾಥ ಬುಟ್ಟೆ, ಶಿವಾಜಿರಾವ ಪಾಟೀಲ್ ಮುಂಗನಾಳ, ಬಾಬುರಾವ ತಾರೆ, ಸುಧಾಕರ ಕೊಳ್ಳುರ್, ಗುರುನಾಥ ವಡ್ಡೆ, ಸಂಜಯ ಧುಳೆ, ವಿಜಯಕುಮಾರ್, ನರಸಿಂಗ ಮಾನೆ, ವಾಮನ ಮಾನೆ, ರಾಜಕುಮಾರ ಮಾನೆ ಸೇರಿದಂತೆ ಇನ್ನಿತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X