ಬಿ ಎಲ್ ಸಂತೋಷ್ ಮೊದಲು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್‌ ತಿರುಗೇಟು

Date:

Advertisements
  • ‘ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದೇ ಬಿಜೆಪಿ ಕೆಲಸ’
  • ‘ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆಂದು ಅರ್ಥಮಾಡಿಕೊಳ್ಳಲಿ’

ಬಿ ಎಲ್ ಸಂತೋಷ್ ಅವರು ಬೇರೆ ಪಕ್ಷದವರನ್ನು ಕರೆತಂದು ಹೊಸ ಸರ್ಕಾರ ರಚನೆ ಮಾಡುವುದು ದೂರದ ಮಾತು. ಮೊದಲು ತಮ್ಮ ಪಕ್ಷದಲ್ಲಿ ಇರುವವರನ್ನು ಮತ್ತು ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್‌ ಸದಸ್ಯ ಜಗದೀಶ್ ಶೆಟ್ಟರ್‌ ತಿರುಗೇಟು ನೀಡಿದ್ದಾರೆ.‌

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದೇ ಬಿಜೆಪಿ ಕೆಲಸ. ಇಡೀ ರಾಷ್ಟ್ರದಲ್ಲಿ ಆಪರೇಶನ್ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬಂದಿಲ್ಲ. ಈ ಬಾರಿ ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆ ಎಂಬುವುದನ್ನು ಅರ್ಥಮಾಡಿಕೊಳ್ಳಲಿ” ಎಂದು ಕುಟುಕಿದ್ದಾರೆ.

“ತಮ್ಮ ಸಂಪರ್ಕದಲ್ಲಿ ಶಾಸಕರು ಇದ್ದರೆ ನಾಳೆಯಿಂದಲೇ ಆಪರೇಶನ್ ಶುರು ಮಾಡಲಿ. ಪಕ್ಷದಲ್ಲಿರುವ ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರುವುದು ನಿಮ್ಮ ಕೆಲಸ, ಬೆಳಗ್ಗೆಯಿಂದ ಸಾಯಂಕಾಲದವರೆಗೂ ಆಪರೇಶನ್ ಮಾಡುವುದೇ ಕೆಲಸವಾಗಿದೆ” ಎಂದು ಹರಿಹಾಯ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

“ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಯಾರು ಎಂದು ಹೇಳಿದ್ದೇನೆ. ಹಿಂದೆಯೂ ಅವರ ಬಗ್ಗೆ ಮಾತನಾಡಿದ್ದೇನೆ. ಅಂತಹವರ ಬಗ್ಗೆ ದೆಹಲಿಯಲ್ಲಿ ಕುಳಿತಿರುವ ಬಿಜೆಪಿ ನಾಯಕರು ಯೋಚನೆ ಮಾಡಬೇಕು. ಬಿಜೆಪಿ ಪಕ್ಷವು ಕೆಲವೇ ಜನರ ಕೈಯಲ್ಲಿರುವ ಕಾರಣ ಈ ಸ್ಥಿತಿ ಒದಗಿ ಬಂದಿದೆ, ರಾಜ್ಯ ಬಿಜೆಪಿ ನಾಯಕರ ಪರಿಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ” ಎಂದರು.

“ಜನರ ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬರುವತ್ತ ಬಿಜೆಪಿ ಚಿಂತನೆ ಮಾಡುವುದು ಬಿಟ್ಟು ವಾಮಮಾರ್ಗದ ಬಗ್ಗೆ ಹೆಚ್ಚು ಯೋಚನೆ ಮಾಡುತ್ತದೆ. ಬಿಜೆಪಿ ಮುಳುಗುತ್ತಿರುವ ಹಡಗು. ಅವರ ಪಕ್ಷದ ಬಗ್ಗೆ ಮಾತನಾಡುವುದು ನಿಷ್ಪ್ರಯೋಜಕ” ಎಂದು ಹೇಳಿದರು.

“ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಜೊತೆ ನಾನು ಮಾತಾಡಿಲ್ಲ. ಹೈಕಮಾಂಡ್ ಕೂಡಾ ನನಗೆ ಏನೂ ಹೇಳಿಲ್ಲ” ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X