ಹೊಸ ಐಷಾರಾಮಿ ಕಾರು ಪಡೆಯಲಿರುವ 33 ಸಚಿವರು: ₹9.90 ಕೋಟಿ ಹಣ ಬಿಡುಗಡೆ

Date:

Advertisements
  • ₹30 ಲಕ್ಷದ 33 ಕಾರು ಖರೀದಿಗೆ ಹಣ ಮಂಜೂರು ಮಾಡಿದ ರಾಜ್ಯ ಸರ್ಕಾರ
  • ಇನ್ನೋವಾ ಹೈಬ್ರಿಡ್ ಹೈಕ್ರಾಸ್​ ಮಾಡೆಲ್​ನ ಕಾರು ಖರೀದಿಗೆ ಹಣ

ಸಿದ್ದರಾಮಯ್ಯ ಸರ್ಕಾರವು ಸಂಪುಟದ 33 ಸಚಿವರಿಗಾಗಿ ಹೊಸ ಕಾರು ಖರೀದಿಸಲು ಆದೇಶ ನೀಡಿದ್ದು, ಪ್ರತಿಯೊಬ್ಬ ಸಚಿವರಿಗೂ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಬ್ರಿಡ್ ಕಾರು ಶೀಘ್ರದಲ್ಲೇ ಸಿಗಲಿದೆ.

ಹೊಸ ಕಾರು ಖರೀದಿಗಾಗಿ ಒಟ್ಟು ರೂ. 9.90 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಹೊಸ ಕಾರುಗಳನ್ನು ಖರೀದಿಸಲು ಕರ್ನಾಟಕ ಸರ್ಕಾರವು 9.9 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಎಲ್ಲ 33 ಸಚಿವರು ಅತ್ಯಾಧುನಿಕ ಕಾರು ಪಡೆಯಲಿದ್ದಾರೆ.

Advertisements

ಇತ್ತೀಚೆಗೆ ಬಿಡುಗಡೆಯಾದ ಟೊಯೋಟಾ ಕಂಪನಿಯ ಇನ್ನೋವಾ ಹೈಬ್ರಿಡ್ ಹೈಕ್ರಾಸ್​ ಮಾಡೆಲ್​ನ 33 ಕಾರುಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ.

WhatsApp Image 2023 09 01 at 7.59.04 PM

ಪ್ರತಿ ಸಚಿವರಿಗೆ ಒಂದರಂತೆ ಕಾರು ಖರೀದಿಸಲಾಗುತ್ತಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಬಿಡುಗಡೆ ಮಾಡಿರುವ ಆದೇಶದ ಪ್ರಕಾರ, ಪ್ರತಿ ಕಾರಿಗೆ ಸುಮಾರು 30 ಲಕ್ಷ ರೂಪಾಯಿ (ಜಿಎಸ್‌ಟಿ ಸೇರಿದಂತೆ ಎಕ್ಸ್ ಶೋರೂಂ ದರ) ವೆಚ್ಚವಾಗಲಿದೆ ಎಂದು ವರದಿಯಾಗಿದೆ.

ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿನ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯ ಸೆಕ್ಷನ್ 4 (ಜಿ) ಅಡಿಯಲ್ಲಿ ಸರ್ಕಾರವು ನೇರವಾಗಿ ಟೊಯೋಟಾ ಕಿರ್ಲೋಸ್ಕರ್ ಬೆಂಗಳೂರು ಘಟಕದಿಂದ ಕಾರುಗಳನ್ನು ಖರೀದಿಸಲು ಮುಂದಾಗಿದ್ದು, ಈ ಕಾರುಗಳು ಆ.29 ರಂದು ಬಿಡುಗಡೆಯಾದ ವಿಶ್ವದ ಮೊದಲ ಸಂಪೂರ್ಣ ಎಥೆನಾಲ್ ಚಾಲಿತ ಫ್ಲೆಕ್ಸ್ ಇಂಧನ ಎಂಜಿನ್ ಹೊಂದಿವೆ.

ಈ ಕಾರು ಮಾರುಕಟ್ಟೆಗೆ ಬರುವಾಗ ಎಂಟು ವಿವಿಧ ರೀತಿಯ ಬೆಲೆಯಲ್ಲಿ ಬಿಡುಗಡೆಯಾಗಿತ್ತು. 18 ಲಕ್ಷದಿಂದ ಕಾರಿನ ಬೆಲೆ ಆರಂಭಗೊಳ್ಳುತ್ತದೆ.

WhatsApp Image 2023 09 01 at 8.00.01 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X