ಸಂವಿಧಾನದ 73ನೇ ತಿದ್ದುಪಡಿಯಿಂದ ಪಂ. ರಾಜ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ: ಸಚಿವ ಎಚ್.ಕೆ ಪಾಟೀಲ್

Date:

Advertisements

ಸಂವಿಧಾನಕ್ಕೆ 73ನೇ ತಿದ್ದುಪಡಿ ತಂದ ನಂತರ ಮೂವತ್ತು ವರ್ಷಗಳ ಅವಧಿಯನ್ನು ಅವಲೋಕನ ಮಾಡುವುದು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಡಾ. ಎಚ್.ಕೆ ಪಾಟೀಲ್ ಹೇಳಿದ್ದಾರೆ.

ಗದಗದಲ್ಲಿ ನಡೆಯುತ್ತಿರುವ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿನ ಬದಲಾವಣೆಗಾಗಿ ಭಾರತೀಯ ಸಂವಿಧಾನಕ್ಕೆ 73ನೇ ತಿದ್ದುಪಡಿ ತರಲಾಗಿತ್ತು. ತಿದ್ದುಪಡಿಗಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಅವಿರತ ಪ್ರಯತ್ನ ಪಟ್ಟಿದ್ದರು. ನಂತರ, ಪ್ರಧಾನಿ ನರಸಿಂಹರಾವ್ ಅವರ ಅವಧಿಯಲ್ಲಿ 73ನೇ ತಿದ್ದುಪಡಿ ತಂದರು. ಇದರಿಂದ ಗ್ರಾಮೀಣ ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಾಲವಣೆಯನ್ನು ಇಂದು ನಾವೆಲ್ಲ ಕಾಣುತ್ತಿದ್ದೇವೆ” ಎಂದು ವಿವರಿಸಿದರು.

“ರಾಜಕೀಯ ಪಕ್ಷಗಳು ಪಂಚಾಯತಿಗಳಿಗೆ ನೀಡಿದ ಕೊಡುಗೆಯನ್ನು ಮೆಲಕು ಹಾಕಬೇಕಾಗಿದೆ. ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿನ ಪಂಚಾಯತಿಗಳು ಉತ್ತಮ ಸ್ಥಿತಿಯಲ್ಲಿವೆ. ಪರಿಶಿಷ್ಟರನ್ನು, ಹಿಂದುಳಿದ, ಬಡವರ ಹಾಗೂ ಮಹಿಳೆಯರನ್ನು ಪಂಚಾಯತಿ ಅಧ್ಯಕ್ಷರನ್ನಾಗಿಸಲಾಗಿದೆ. ಆದರೆ, ಶತಮಾನಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಮಹಿಳೆಗೆ ರಾಜಕೀಯ, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವಂತೆ ಬಸವಣ್ಣನವರು ಹೇಳಿದ್ದರೂ ಕೂಡ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಆದರೆ, 73ನೇ ತಿದ್ದುಪಡಿಯ ಮೂಲಕ ಮಹಿಳೆಯರಿಗೆ ಎಲ್ಲ ಸ್ಥಾನಮಾನಗಳನ್ನು ನೀಡಲಾಯಿತು. ಈ ತಿದ್ದುಪಡಿ ಕಾನೂನು ಅನುಷ್ಠಾನದಲ್ಲಿ ರಾಜ್ಯವು ಮುಂಚೂಣಿಯಲ್ಲಿತ್ತು” ಎಂದು ಹೇಳಿದ್ದಾರೆ.

Advertisements

“ಪಂಚಾಯತ್ ವ್ಯವಸ್ಥೆಯಲ್ಲಿನ ಜನ ಪ್ರತಿನಿಧಿಗಳು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿರಬೇಕು. ಗಾಂಧೀ ಕಾಯಕ ಸಾಕ್ಷಿ ತಂತ್ರಜ್ಞಾನದ ಸದ್ಬಳಕೆ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಅಧಿಕಾರದ ಸದ್ಬಳಕೆ ಆಗಬೇಕು. ಗದಗ ಜಿಲ್ಲೆಯು ಗ್ರಾಮ ಪಂಚಾಯತಿ ಹಂತದಲ್ಲಿ ತಳಮಟ್ಟದಿಂದ ಮೆಲ್ಮಟ್ಟಕ್ಕೆ ಯೋಜನೆ ರೂಪಿಸಿವದರಲ್ಲಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

“ಗ್ರಾಮಗಳು ವ್ಯಾಜ್ಯ ಮುಕ್ತ, ತ್ಯಾಜ್ಯ ಮುಕ್ತ, ಶೋಷಣೆ ಮುಕ್ತ, ಭಯ ಮುಕ್ತ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ಕಾನೂನುಗಳನ್ನು ನೀಡಲಾಗಿದೆ. ವಿಶ್ವವಿದ್ಯಾಲಯದ ಪ್ರತಿ ಐದು ವಿಧ್ಯಾರ್ಥಿಗಳಿಗೆ ಒಂದೊಂದು ಗ್ರಾಮಗಳನ್ನು ನೀಡಿ ಗ್ರಾಮಗಳನ್ನು ವ್ಯಾಜ್ಯ, ತ್ಯಾಜ್ಯ, ಶೋಷಣೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸಲು ಪಣತೊಡಬೇಕು” ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ಸಾರ್ವಜನಿಕ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಪಂಚಾಯತ್ ರಾಜ್ ಕಮಿಷನರೇಟ ನಿರ್ದೆಶಕಾರದ ಏಕಾಂತಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್.ಎಸ್ ಮಿನಾಕ್ಷಿ ಸುಂದರಂ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X