ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್‌, ಪ್ರಚಾರ ಪಡೆಯುತ್ತಿರುವುದು ಬಿಜೆಪಿ: ಬಿ ಕೆ ಹರಿಪ್ರಸಾದ್‌ ಕಿಡಿ

Date:

Advertisements
  • ‘ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ’
  • ‘ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ’

ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಸ್ಥಳ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ, ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಕಿಡಿಕಾರಿದರು.

ಖಾಸಗಿ ಕಾರ್ಯಕ್ರಮದ ನಿಮ್ಮಿತ್ತ ಕಲಬುರಗಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ. ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ” ಎಂದರು.

“ಚಂದ್ರಯಾನ-3ರಲ್ಲಿ ಕಾರ್ಯನಿರ್ವಹಿಸಿದ್ದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ಗಮನಾರ್ಹ ಸಂಗತಿ” ಎಂದು ಹರಿಪ್ರಸಾದ್ ಹೇಳಿದರು.

Advertisements

“ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಘೋಷಣೆಗಳಿಗೇನು ಕಮ್ಮಿ ಇಲ್ಲ. ಬಿಜೆಪಿಯು ರಾಷ್ಟ್ರದ ವೈವಿಧ್ಯತೆ ಹಾಳು ಮಾಡುತ್ತಿದ್ದು, ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತಿದೆ. ಒನ್ ನೇಷನ್ ಒನ್ ಲೀಡರ್ ಅಂದರು ಅನ್ನಬಹುದು, ದೇಶದಲ್ಲಿ ಇಡಿ ಮತ್ತು ಸಿಬಿಐ ಬಳಸದೇ ಚುನಾವಣೆ ನಡೆಸಬೇಕಾಗಿದೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

“ಸಚಿವ ಸ್ಥಾನ ಸಿಗದಿರುವುದಕ್ಕೆ ನಾನು ಮುನಿಸಿಕೊಂಡಿಲ್ಲ. ನಾನು ಪಕ್ಕಾ ಕಾಂಗ್ರೆಸ್ಸಿನವನು. ನನ್ನ ಹೋರಾಟ ಮಂತ್ರಿ ಸ್ಥಾನಕ್ಕಲ್ಲ, ಸಣ್ಣ ಸಮುದಾಯಗಳಿಗೆ ಅವಕಾಶ ಸಿಗಬೇಕು ಎಂಬುದು. ಈ ವಿಚಾರದಲ್ಲಿ ನಾನು ಬೀದಿಗಿಳಿದು ಹೋರಾಟ ಮಾಡಲು ಸಿದ್ಧ” ಎಂದರು.

“ಜವಾನನಿಂದ ಹಿಡಿದು ದಿವಾನನವರೆಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ಕೊಡಬೇಕು ಎಂಬುದನ್ನು ಇಂದಿರಾ ಗಾಂಧಿಯವರನ್ನು ನೋಡಿ ಇಂದಿನವರು ಕಲಿಯಬೇಕು” ಎಂದು ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೇ ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X