ಬಿಜೆಪಿ ಸಂಸದರು ರಾಜ್ಯದ ಜನರ ಪರ ಇರಬೇಕಾದವರು ಕೇಂದ್ರದ ಗುಲಾಮರಾಗಿದ್ದಾರೆ: ಮುಖ್ಯಮಂತ್ರಿ ಚಂದ್ರು

Date:

Advertisements

ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದರು.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಶನಿವಾರ ಪ್ರತಿಭಟನೆ ನಡೆಸಿದವು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಸಮಸ್ಯೆ ಉಲ್ಬಣಕ್ಕೆ ಕೇಂದ್ರ ಸರ್ಕಾರವು ಕಾರಣ. ಈ ವಿಚಾರದಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲ ಸಂಸದರೇ ನೇರ ಹೊಣೆ. ಕಾವೇರಿ ವಿಚಾರದಲ್ಲಿ ಹೋರಾಟಗಳು ನಡೆಯುತ್ತಿದ್ದರೂ, ಸಂಸದರು ಏನನ್ನೂ ಮಾತನಾಡುತ್ತಿಲ್ಲ. ರಾಜ್ಯದ ಜನರಿಗೆ ಗುಲಾಮರಾಗಬೇಕಿದ್ದ ಬಿಜೆಪಿ ಸಂಸದರೆಲ್ಲ ಕೇಂದ್ರ ಸರ್ಕಾರದ ಗುಲಾಮರಾಗಿದ್ದಾರೆ. ಬಿಜೆಪಿಯಿಂದ ಮತ್ತೆ ಸಂಸದರಾಗಬೇಕು ಎನ್ನುವ ಯತ್ನದಲ್ಲಿ ನೀರಿಗಾಗಿ ನಡೆಯುತ್ತಿರುವ ಹೋರಾಟವನ್ನು ನಿರ್ಲಕ್ಷ್ಯಿಸುತ್ತಿದ್ದಾರೆ” ಎಂದು ದೂರಿದರು.

Advertisements

“ಸ್ವಾತಂತ್ರ್ಯದ ಪೂರ್ವದಿಂದ ಈ ಸಮಸ್ಯೆ ಅಸ್ತಿತ್ವದಲ್ಲಿದೆ. ಸ್ವಾತಂತ್ರ್ಯಾ ಬಂದ ಎಲ್ಲ ಸರ್ಕಾರಗಳು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಎಡವಿವೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲವಾಗಿದ್ದು, ರಾಜ್ಯಕ್ಕೆ ಅನ್ಯಾಯ ಎಸಗಿವೆ. ರಾಜಕೀಯ ಲಾಭಕ್ಕಾಗಿ ಕೆಲಸ ಮಾಡಿವೆ ಹೊರತು ಸಮಸ್ಯೆಯ ಪರಿಹಾರಕ್ಕೆ ಯಾವೊಂದು ಸರ್ಕಾರವು ಪ್ರಯತ್ನಿಸಿಲ್ಲ. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಈ ನಿಟ್ಟಿನಲ್ಲಿ ಹೋರಾಟ ಆರಂಭಿಸಿದೆ” ಎಂದು ತಿಳಿಸಿದರು.

“ನಮ್ಮಲ್ಲಿ ನೀರಿನ ಕೊರತೆ ಎದುರಾಗಿರುವಾಗ, ಬೇರೆಯವರಿಗೆ ನೀರನ್ನು ಒದಗಿಸಲೇ ಬೇಕು ಎನ್ನುವ ಕಾನೂನು ಎಷ್ಟು ಸರಿ. ರಾಜ್ಯದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ನೀರು ಬಿಡಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ನೀರನ್ನು ನೀಡಲು ಹೇಗೆ ಸಾಧ್ಯ. ತಮಿಳುನಾಡಿನವರು ನೀರು ಅಥವಾ ಗಡಿ ವಿಚಾರದಲ್ಲಿ ಮೊದಲೇ ಎಚ್ಚೆತ್ತುಕೊಳ್ಳುತ್ತಾರೆ. ಆದರೆ, ನಮ್ಮಲ್ಲಿ ಆ ಪರಿಸ್ಥಿತಿಯಿಲ್ಲ. ತಮಿಳುನಾಡು ಸರ್ಕಾರವೇ ಮೊದಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಳಿಕವೂ ಸಮರ್ಪಕ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 225 ವಾರ್ಡ್‌ ವಿಂಗಡಣೆಗೆ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ

“ರಾಜ್ಯದಲ್ಲಿ ಆಡಳಿತ ನಡೆಸಿರುವ ರಾಷ್ಟ್ರೀಯ ಪಕ್ಷಗಳು ಕಾವೇರಿ ನದಿ ನೀರು ಹಂಚಿಕೆ, ಮೇಕೆದಾಟು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಎಸಗಿವೆ. ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ನೂರಾರು ಕೋಟಿ ಖರ್ಚು ಮಾಡಿ ಖಾತರಿ ಯೋಜನೆಯ ಉದ್ಘಾಟನೆ ಮಾಡುತ್ತಾರೆ. ಆದರೆ, ನೀರಿನ ವಿಚಾರದಲ್ಲಿ ನ್ಯಾಯಾಲಯಕ್ಕೆ ವಸ್ತುಸ್ಥಿತಿಯನ್ನು ವಿವರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X