ಮಂಡ್ಯ | ಕಾವೇರಿಗೆ ನಮಿಸಲು ಅವಕಾಶ ನಿರಾಕರಣೆ; ನಿಗಮದ ಮುಖ್ಯ ಎಂಜಿನಿಯರ್ ಕ್ಷಮೆ ಕೋರುವಂತೆ ರೈತ ಸಂಘ ಆಗ್ರಹ

Date:

Advertisements

ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಣೆ ಮಾಡಿದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕ್ಷೇಮೆ ಕೋರಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟುಹಿಡಿದರು.

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಬಳಿ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ವೇಳೆ ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಬೃಂದಾವನದ ಒಳಗಿರುವ ಕಾವೇರಿ ಮಾತಿಗೆ ನಮಿಸಲು ಪಂಜಿನ ಮೆರವೆಣೆಗೆ ಮೂಲಕ ಮುತ್ತಿಗೆ ಹಾಕಿದರು.

ಈ ವೇಳೆ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಿಸಿದ್ದರಿಂದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿ, “ನಿಗಮದ ಎಂಜಿನಿಯರ್‌ ಪ್ರತಿಭಟನಾಕಾರರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕಾವೇರಿ ಮಾತೆ ಪ್ರತಿಮೆ ಬಳಿಯೇ ಚಳವಳಿ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಇಲಾಖೆಗಳಲ್ಲಿನ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಶಾಸಕರು ಹಾಗೂ ರೈತ ಸಂಘದ ಕ್ಷಮೆ ಕೋರಿದ ಬಳಿಕ ಎಂದಿನಂತೆ ಆಹೋರಾತ್ರಿ ಧರಣಿ ಸ್ಥಳದಲ್ಲಿ ಪ್ರತಿಭಟನೆ ಮುಂದುವರಿಸಿದರು.

ಈ ವೇಳೆ ಬಡಗಪುರ ನಾಗೇಂದ್ರ, ಕೆಂಪೂಗೌಡ್ರು, ಪಿ ನಾಗರಾಜ್, ಕೊಡಗಿನ ಮನುಸೋಮಯ್ಯ, ಹೋಸಕೋಟೆ ಬಸವರಾಜ್ ಸೇರಿದಂತೆ ಪಾಂಡವಪುರ, ಶ್ರೀರಂಗಪಟ್ಟಣದ ರೈತ ಸಂಘದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X