ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

Date:

Advertisements

ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಅವರು ಇಂದು(ಸೆ.03) ಮುಂಜಾನೆ ತಮ್ಮ 49 ನೇ ವಯಸ್ಸಿನಲ್ಲಿ ನಿಧನರಾದರು. ಹೀತ್ ಸ್ಟ್ರೀಕ್ ನಿಧನದ ಬಗ್ಗೆ ಅವರ ಪತ್ನಿ ನಾಡಿನ್ ಫೇಸ್‌ಬುಕ್‌ ಮೂಲಕ ಖಚಿತಪಡಿಸಿದ್ದಾರೆ.

“ಸೆಪ್ಟೆಂಬರ್ 3, 2023 ರ ಭಾನುವಾರದ ಮುಂಜಾನೆ, ನನ್ನ ಜೀವನದ ಅತ್ಯಂತ ದೊಡ್ಡ ಪ್ರೀತಿ ಮತ್ತು ನನ್ನ ಸುಂದರ ಮಕ್ಕಳ ತಂದೆ, ತನ್ನ ಕೊನೆಯ ದಿನಗಳನ್ನು ಕಳೆಯುತ್ತಿರುವ ಸಮಯದಲ್ಲಿ ದೇವತೆಗಳು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅವರು ನಮ್ಮನ್ನು ಬಿಟ್ಟು ಹೋದರೂ ಅವರೊಂದಿಗಿನ ನಮ್ಮ ಪ್ರೀತಿ ಶಾಶ್ವತವಾಗಿ ಇರುತ್ತದೆ” ಎಂದು ನಾಡಿನ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಶ-ದ್ವೇಷ ಮೀರಿ ನಿಂತ ನೀರಜ್ ಚೋಪ್ರಾ – ಭಾರತದ ನಿಜವಾದ ಕ್ರೀಡಾ ಜ್ಯೋತಿ

Advertisements

ಮಾಜಿ ಜಿಂಬಾಬ್ವೆ ಅಂತಾರಾಷ್ಟ್ರೀಯ ಆಟಗಾರ ಜಾನ್ ರೆನ್ನಿ ಕೂಡ ಹೀತ್ ಸ್ಟ್ರೀಕ್ ನಿಧನದ ಸುದ್ದಿಯನ್ನು ದೃಢಪಡಿಸಿದ್ದಾರೆ.

Heath Streak 1

ಜಿಂಬಾಬ್ವೆ ಕ್ರಿಕೆಟ್ ತಂಡದ ನಾಯಕರಾಗಿದ್ದ ಹೀತ್ ಅವರು, ತಮ್ಮ ದೇಶದ ಪರ 1993-2005ರ ಅವಧಿಯಲ್ಲಿ 65 ಟೆಸ್ಟ್‌ಗಳಲ್ಲಿ 216 ವಿಕೆಟ್‌ಗಳು ಮತ್ತು 1,990 ರನ್‌ಗಳನ್ನು ಗಳಿಸಿದ್ದಾರೆ. 189 ಏಕದಿನ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಿಂದ 2,943 ರನ್ ಮತ್ತು 239 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಹೀತ್ ಅವರು ನಿವೃತ್ತಿಯ ನಂತರ, ಜಿಂಬಾಬ್ವೆ ಮತ್ತು ಬಾಂಗ್ಲಾದೇಶದಂತಹ ಹಲವಾರು ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತುದಾರರಾಗಿದ್ದಾರೆ. ಅವರು ಐಪಿಎಲ್‌ನ ಕೆಕೆಆರ್‌ ತಂಡದ ಜೊತೆ ಸಹ ಸಂಬಂಧ ಹೊಂದಿದ್ದರು .

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X