ವಿಜಯನಗರ | ಮನರೇಗಾ ಯೋಜನೆ ಅಡಿ ಕೆಲಸ ನೀಡುವಂತೆ ಗ್ರಾಕೂಸ ಕಾರ್ಯಕರ್ತೆಯರ ಆಗ್ರಹ

Date:

Advertisements

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರ ಕುಟುಂಬಗಳಿಗೆ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಗ್ರಾಕೂಸ ಕಾರ್ಮಿಕ ಮಹಿಳೆಯರು ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಕುಂಚೂರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಕೂಸ ಕಾರ್ಯಕರ್ತೆಯರು ಕುಂಚೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜು ನಾಯಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘದ ತಾಲೂಕು ಕಾರ್ಯಕರ್ತೆ ಭಾಗ್ಯ ಮಾತನಾಡಿ, “ಸಂಘಟನೆಯ ಕಾರ್ಮಿಕ ಮಹಿಳೆಯರು ಕಳೆದ 20 ದಿನಗಳ ಹಿಂದೆ ಧರಣಿ ನಡೆಸಿದ್ದು. ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡುವಂತೆ 600 ಮಂದಿ ಅರ್ಜಿ ಸಲ್ಲಿಸಿದ್ದೇವೆ. ಕೂಲಿ ಕೆಲಸ ಕೊಡುವಂತೆ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದೇವೆ. ಆದರೆ ಕಾರ್ಮಿಕರ ಅಧಿಕಾರಿಗಳು ಅಹವಾಲು ಸ್ವೀಕರಿಸದೆ, ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಆರೋಪಿಸಿದರು.

Advertisements

“ಕುಂಚೂರು ಪಂಚಾಯಿತಿ ಮುಂದೆ ಎರಡು ದಿನದಿಂದ ಕಾರ್ಮಿಕರು ದುಡಿಯುವ ಕೈಗಳಿಗೆ ಕೆಲಸ ಕೊಡಿ ಎಂದು ಅಂಗಲಾಚುತ್ತಿದ್ದೇವೆ. ಮಳೆ, ಬೆಳೆ ಇಲ್ಲದೆ ಬಡ ಕುಟುಂಬಗಳು ವಲಸೆ ಹೋಗುತ್ತಿದ್ದಾರೆ. ಮನರೇಗಾ ಯೋಜನೆ ಅಡಿಯಲ್ಲಿ ಒಂದು ಪಂಚಾಯಿತಿ ವ್ಯಾಪ್ತಿಯ ಸಾವಿರ ಕುಟುಂಬಗಳು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಹಾಗಾಗಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಅಡುಗೆ ಸಹಾಯಕಿಗೆ ಜಾತಿ ನಿಂದನೆ; ಪ್ರಕರಣ ದಾಖಲಿಸಿದರೂ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ; ಆರೋಪ

“ಅರ್ಜಿ ಸಲ್ಲಿಸಿರುವ ಪ್ರಕಾರ ಕೆಲಸ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ನೀಲಮ್ಮ, ಮಲ್ಲವ್ವ , ಅಕ್ಕಮ್ಮ, ಗಿರಿಜಾ, ಪಾರ್ವತಿ, ನಾಗಮ್ಮ, ಸಾವಿತ್ರಿ, ಗೌರಮ್ಮ, ಸಂತಮ್ಮ ಸೇರಿದಂತೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X