ತೆಲಂಗಾಣ | ಮೇಕೆ ಕಳವು ಶಂಕೆ; ದಲಿತ ವ್ಯಕ್ತಿಯ ತಲೆಕೆಳಕಾಗಿ ನೇತು ಹಾಕಿ ಅಮಾನುಷ ಹಲ್ಲೆ

Date:

Advertisements

ಮೇಕೆಯೊಂದನ್ನು ಕಳವು ಮಾಡಲಾಗಿದೆ ಎಂಬ ಶಂಕೆಯಲ್ಲಿ ಓರ್ವ ದಲಿತ ವ್ಯಕ್ತಿ ಒಳಗೊಂಡು ಇಬ್ಬರು ಯುವಕರನ್ನು ತಲೆ ಕೆಳಕಾಗಿ ನೇತು ಹಾಕಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ತೆಲಂಗಾಣದ ಮಂಚಿರಿಯಾಲ್ ಜಿಲ್ಲೆಯ ಮಂದಮಾರಿ ಪಟ್ಟಣದಲ್ಲಿ ನಡೆದಿದೆ.

ಘಟನೆಗ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಕೊಮುರಾಜುಲ ರಾಮುಲು, ಅವರ ಪತ್ನಿ ಸ್ವರೂಪ ಮತ್ತು ಪುತ್ರ ಶ್ರೀನಿವಾಸ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಥಳೀಯ ಪೊಲೀಸರ ಪ್ರಕಾರ, ಮಂದಮಾರಿಯ ಅಂಗಡಿ ಬಜಾರ್‌ನ ಕೋಮುರಾಜು ರಾಮುಲು, ಆತನ ಪತ್ನಿ ಸ್ವರೂಪ ಹಾಗೂ ಅವರ ಪುತ್ರನಾದ ಶ್ರೀನಿವಾಸ್ ಪಟ್ಟಣದ ಹೊರವಲಯದಲ್ಲಿನ ಗಂಗನೀಲ್ಲಪಂಪುಲ ಬಳಿ ಮೇಕೆಯ ಗುಂಪೊಂದನ್ನು ಸಾಕಿಕೊಂಡಿದ್ದರು. ಆ ಗುಂಪಿನಿಂದ ಮೇಕೆಯೊಂದು ಕಾಣೆಯಾಗಿರುವುದು ಇಪ್ಪತ್ತು ದಿನಗಳ ಹಿಂದೆ ಅವರ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೋಪಾಲಕ ತೇಜಾ ಮತ್ತು ಆತನ ದಲಿತ ಸ್ನೇಹಿತ ಚಿಲುಮುಲ ಕಿರಣ್ ಅವರನ್ನು ಮೇಕೆಯನ್ನು ಕದ್ದಿರುವ ಶಂಕೆಯ ಮೇರೆಗೆ ಕಳೆದ ಶುಕ್ರವಾರ ಶೆಡ್‌ಗೆ ಕರೆಸಲಾಗಿತ್ತು.

Advertisements

ಶೆಡ್‌ಗೆ ಕರೆಸಿದ ನಂತರ ಅವರನ್ನು ಕಟ್ಟಿ ತಲೆಕೆಳಕಾಗಿ ನೇತು ಹಾಕಿದ್ದಾರೆ. ನಂತರ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಆರೋಪಿಗಳೆ ಈ ಘಟನೆಯನ್ನು ತಮ್ಮ ಮೊಬೈಲ್‌ ಫೋನ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.5ರಂದು ‘ಇಂಡಿಯಾ’ ಸಂಸದರ ಸಭೆ ಕರೆದ ಖರ್ಗೆ; ಒಂದು ಚುನಾವಣೆಯ ಬಗ್ಗೆ ವಾಗ್ದಾಳಿ

ಶನಿವಾರದಂದು ತೀವ್ರವಾಗಿ ಗಾಯಗೊಂಡಿದ್ದ ತೇಜಾ ಹಾಗೂ ಕಿರಣ್ ತಮ್ಮ ಮನೆಗಳಿಗೆ ಹಿಂದಿರುಗಿದ ನಂತರ ಈ ಘಟನೆಯು ಬೆಳಕಿಗೆ ಬಂದಿದೆ.

ಕೂಡಲೇ ಮಂದಾಮಾರಿಗೆ ಧಾವಿಸಿರುವ ಬೆಲ್ಲಂಪಲ್ಲಿ ಸಹಾಯಕ ಪೊಲೀಸ್ ಆಯುಕ್ತ ಬಿ. ಸಾದಯ್ಯ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಕುಮಾರ್, ಘಟನೆಯ ಕುರಿತು ವಿಚಾರಣೆ ಕೈಗೊಂಡಿದ್ದಾರೆ. ನಂತರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪಿ ಕುಟುಂಬದ ಮೂವರು ಸದಸ್ಯರು ಹಾಗೂ ಅವರ ಸಹಾಯಕ ನರೇಶ್ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X