ಬೆಂಗಳೂರು | ಉಳ್ಳಾಲ ಕೆರೆಯಲ್ಲಿ ಮೀನುಗಾರಿಕೆ ನಡೆಸದಂತೆ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ವಹಣೆ ಮಾಡುತ್ತಿರುವ ಉಳ್ಳಾಲ ಕೆರೆಯಲ್ಲಿ ಇತ್ತೀಚೆಗೆ ಮೀನುಗಳ ಮಾರಣಹೋಮ ನಡೆದಿದೆ. ಹಾಗಾಗಿ, ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಮೇಲ್ದರ್ಜೆಗೇರಿಸಿ ಕಾಮಗಾರಿ ಮುಗಿಯುವವರೆಗೆ ಈ ಕೆರೆಯಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರಿಕೆ ಇಲಾಖೆಗೆ ಪತ್ರ ಕಳುಹಿಸಲಾಗುವುದು ಎಂದು ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್‌ಕುಮಾರ್ ಹರಿದಾಸ್ ಹೇಳಿದರು.

“ಮಲ್ಲತ್ತಹಳ್ಳಿ ಕೆರೆಯಲ್ಲಿ ಡೌನ್‌ಸ್ಟ್ರೀಮ್ ಪೂರ್ಣಗೊಂಡಿದೆ. ಎಸ್‌ಟಿಪಿ ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ ಒಂದು ಅಥವಾ ಎರಡು ವರ್ಷ ಬೇಕಾಗಲಿದ್ದು, ಮಳೆಯ ನೀರೇ ನೀರಿನ ಮೂಲವಾಗಿದೆ. ಕೆರೆಯಲ್ಲಿ ಕೊಳಚೆ ನೀರು ಇರುವ ಬಗ್ಗೆ ದೂರುಗಳು ಬಂದಿದ್ದವು. ಮಲ್ಲತ್ತಹಳ್ಳಿ ಕೆರೆ ಸಮೀಪದ 5 ಎಂಎಲ್‌ಡಿ ಸಾಮರ್ಥ್ಯದ ಎಸ್‌ಟಿಪಿ ಮೇಲ್ದರ್ಜೆಗೇರಿಸಬೇಕು. ಅಲ್ಲಿಯವರೆಗೆ ಮುಂದಿನ ದಿನಗಳಲ್ಲಿ ಮಳೆಯಿಂದ ಕೆರೆ ತುಂಬಿದರೂ ಮೀನು ಕೃಷಿಗೆ ಅವಕಾಶ ನೀಡುವುದಿಲ್ಲ” ಎಂದು ತಿಳಿಸಿದರು.

“ಕೆರೆಗಳಲ್ಲಿ ಮೀನು ಕೃಷಿ ಮಾಡಲು ಗುತ್ತಿಗೆದಾರರಿಗೆ ಮೀನುಗಾರಿಕೆ ಇಲಾಖೆ ಪರವಾನಗಿ ನೀಡುತ್ತದೆ. ಈ ದಾಖಲೆಗಳ ಆಧಾರದ ಮೇಲೆ ಗುತ್ತಿಗೆದಾರರು ಬಿಬಿಎಂಪಿ ಕೆರೆಗಳ ಗುತ್ತಿಗೆಗೆ ಅರ್ಜಿ ಸಲ್ಲಿಸುತ್ತಾರೆ. ಕೆರೆ ತುಂಬುವವರೆಗೂ ಟೆಂಡರ್ ಕರೆಯುವುದಿಲ್ಲ” ಎಂದು ಹೇಳಿದರು.

Advertisements

ಬಿಡಬ್ಲ್ಯುಎಸ್‌ಎಸ್‌ಬಿ ತ್ಯಾಜ್ಯ ನೀರು ನಿರ್ವಹಣೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮುಯಿಜ್ ಅಹಮದ್ ಮಾತನಾಡಿ, “ಮಲ್ಲತ್ತಳ್ಳಿಯಲ್ಲಿರುವ 5 ಎಂಎಲ್‌ಡಿ ಎಸ್‌ಟಿಪಿಯನ್ನು 10 ಎಂಎಲ್‌ಡಿಗೆ ಮೇಲ್ದರ್ಜೆಗೇರಿಸುವುದಾಗಿ ಬಿಬಿಎಂಪಿಗೆ ಪತ್ರ ನೀಡಿದ್ದು, ಅದು ಪೂರ್ಣಗೊಂಡ ನಂತರ ಯೋಜನೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ನೀರನ್ನು ಪರೀಕ್ಷಿಸಿ ನಂತರ ಉಳ್ಳಾಲ ಕೆರೆಗೆ ಬಿಡಲಾಗುವುದು” ಎಂದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಉಪ ಪರಿಸರ ಅಧಿಕಾರಿ ನವೀನ್ ಅವರು ಭೇಟಿ ನೀಡಿ ಕೆರೆಯ ನೀರಿನ ಮಾದರಿ ಸಂಗ್ರಹಿಸಿದರು. ಅಲ್ಲದೆ ಕೆರೆಯಲ್ಲಿ ಹಾಗೇ ಸತ್ತು ತೇಲುತ್ತಿರುವ ಎಲ್ಲ ಮೀನುಗಳನ್ನು ತೆಗೆಯುವಂತೆ ಬಿಬಿಎಂಪಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

”ಕೆರೆ 24.14 ಎಕರೆ ವಿಸ್ತೀರ್ಣ ಹೊಂದಿದ್ದು, ಶೇ. 95ರಷ್ಟು ಭಾಗ ಬತ್ತಿ ಹೋಗಿದೆ. ಜುಲೈನಿಂದ ಮುಂಗಾರು ವೈಫಲ್ಯ, ನೀರಿನ ಕೊರತೆಯಿಂದ ಕೆರೆ ಬತ್ತಿ ಹೋಗಿದೆ. ಕಡಿಮೆ ನೀರು ಮತ್ತು ಕರಗಿದ ಆಮ್ಲಜನಕದ ಮಟ್ಟ ಕುಸಿತವು ಸಾಮೂಹಿಕ ಮೀನುಗಳ ಸಾವಿಗೆ ಕಾರಣವಾಗುವ ಸಾಧ್ಯತೆಯಿದೆ. ಎಸ್‌ಟಿಪಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದ ನಂತರ ಕೆರೆಯಲ್ಲಿ ಸದಾ ನೀರು ಇರುತ್ತದೆ. ಇಲ್ಲವಾದರೆ ಉತ್ತಮ ಮಳೆಗಾಗಿ ಕಾಯಬೇಕು” ಎಂದು ಹೇಳಿದರು.

ಈ ನಡುವೆ ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಅಧ್ಯಕ್ಷ ಡಿ.ಎಸ್.ಗೌಡ ಮಾತನಾಡಿ, “ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬತ್ತಿ ಹೋಗಿರುವ ಕೆರೆಯ ಬೇಲಿಯ ಹೂಳು ತೆಗೆಯುವಂತೆ ಬಿಬಿಎಂಪಿಗೆ ಪತ್ರ ಬರೆದಿದ್ದೇನೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X