ಸನಾತನ ಧರ್ಮ ಕುರಿತು ಹೇಳಿಕೆ | ಉದಯನಿಧಿ ಸ್ಟಾಲಿನ್ ಕೂಡ ನಾಶವಾಗುತ್ತಾರೆ: ಈಶ್ವರಪ್ಪ‌ ಕಿಡಿ

Date:

Advertisements
  • ಚುನಾವಣೆಯಲ್ಲಿ ಒಂದು ವರ್ಗ ಸೆಳೆಯಲು ಈ ರೀತಿ ಮಾಡುತ್ತಾರೆ: ಬೊಮ್ಮಾಯಿ
  • ‘ಸಮಾಜದಲ್ಲಿ ಅಶಾಂತಿ ಇರಬೇಕು ಎಂದು ಬಯಸುವವರು ಈ ರೀತಿ ಹೇಳಿದ್ದಾರೆ’

ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಮತ್ತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಸ್ವಾಮೀಜಿಗಳು ಖಂಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿ, “ಸ್ಟಾಲಿನ್‌ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ನೋಡಿದರೆ ಅವರ ಹಿಟ್ಲರ್‌ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ” ಎಂದು ಟೀಕಿಸಿದ್ದಾರೆ.

“ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು. ಸನಾತನ ಧರ್ಮ ಸರ್ವೇಜನ ಸುಖಿನೋಭವಂತು ಅಂತ ಹೇಳುತ್ತದೆ. ಮಾನವರಷ್ಟೇ ಅಲ್ಲ ಎಲ್ಲ ಜೀವಿಗಳು ಸುಖವಾಗಿರಲಿ ಅಂತ ಸನಾತನ ಧರ್ಮ ಬಯಸುತ್ತದೆ. ಸನಾತನ ಧರ್ಮವನ್ನು ಕಿತ್ತೊಗೆಯಬೇಕೆಂಬ ಮಾತು ಪ್ರಜಾಪ್ರಭುತ್ವ ವಿರೋಧಿಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Advertisements

“ಉದಯನಿಧಿ ಹೇಳಿಕೆ ಬಗ್ಗೆ ‘ಇಂಡಿಯಾ’ ಮೈತ್ರಿಕೂಟದ ಮಿತ್ರ ಪಕ್ಷಗಳು ಗೊಂದಲದಲ್ಲಿವೆ. ಭಾರತದಲ್ಲಿ ಎಲ್ಲ ಧರ್ಮಗಳಿಗೆ ಅವಕಾಶ ಇದೆ. ಇಲ್ಲಿ ಬೌದ್ಧ, ಜೈನ, ಸಿಖ್, ಇಸ್ಲಾಂ, ಸಿಖ್ ಧರ್ಮಗಳು ನೆಮ್ಮದಿಯಾಗಿವೆ. ಸುತ್ತಲಿನ ರಾಷ್ಟ್ರಗಳಲ್ಲಿ ಏನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಅಧಿಕಾರದ ಆಸೆಗೆ ತುಷ್ಟಿಕರಣದ ರಾಜಕಾರಣ ಮಾಡುತ್ತಿದ್ದಾರೆ. ಭಾರತದ ಜನರು ಇದೆಲ್ಲವನ್ನು ಗಮನಿಸುತ್ತಾರೆ. ಅವರು ಸೂಕ್ತ ಉತ್ತರ ನೀಡುತ್ತಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಅವರು ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಅವರ ಅಪ್ಪ ಬಂದರೂ ಸನಾತನ ಧರ್ಮವನ್ನು ನಾಶ ಮಾಡಲು ಸಾಧ್ಯವಿಲ್ಲ. ಅಯೋಗ್ಯರು, ರಾಕ್ಷಸರು ಈ ರೀತಿ ಮಾತನಾಡುತ್ತಾರೆ. ಹಿಂದೆಯೂ ಸಾಕಷ್ಟು ಜನ ಈ ರೀತಿ ಮಾತನಾಡಿದ್ದಾರೆ. ಅವರೆಲ್ಲಾ ನಾಶವಾಗಿದ್ದಾರೆ. ಇವರೂ ನಾಶವಾಗುತ್ತಾರೆ. ಈ ದೇಶ ಉಳಿದಿರುವುದೇ ಸನಾತನ ಧರ್ಮದಿಂದ” ಎಂದು ಕಿಡಿಕಾರಿದರು.

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಈ ಕುರಿತು ಪ್ರತಿಕ್ರಿಯಿಸಿದ್ದು, ಜವಾಬ್ದಾರಿ ಸ್ಥಾನದಲ್ಲಿರುವ ಉದಯನಿಧಿ ಸ್ಟಾಲಿನ್ ಧರ್ಮದ ಕುರಿತು ಈ ರೀತಿ ಮಾತನಾಡಬಾರದು. ನಮ್ಮ ನಡವಳಿಕೆ ಅಕ್ಕ ಪಕ್ಕದ ಮನೆಯವರಿಗೆ ತೊಂದರೆಯಾಗಬಾರದು ಎಂಬುದು ಸನಾತನ ಧರ್ಮದ ಉದ್ದೇಶ. ಆದರೆ, ಸನಾತನ ಧರ್ಮ ವಿರೋಧಿಸುವವರ ಮನಸ್ಥಿತಿ ಹೇಗಿದೆ ಎಂದರೆ ಸಮಾಜದಲ್ಲಿ ಸದಾ ಅಶಾಂತಿ ಇರಬೇಕು ಎಂದು ಬಯಸುತ್ತಾರೆ ಎಂದು ಟೀಕಿಸಿದ್ದಾರೆ.

ಮಾಜಿ ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿ, ತಮಿಳುನಾಡು ಸಚಿವ ಉದಯನಿಧಿ ದುರಹಂಕಾರದ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಅಜ್ಞಾನದಿಂದ ಕೂಡಿದೆ. ಪಕ್ಷದಿಂದ ಅವರನ್ನು​ ಉಚ್ಚಾಟನೆ ಮಾಡಬೇಕು. ದುರಹಂಕಾರದ ಹೇಳಿಕೆಯನ್ನು ಹಿಂಪಡೆಯಲಿ. ಉದಯನಿಧಿ​ ಸ್ಟಾಲಿನ್​ ದೇಶದ ಜನರ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X