ಶಿಕ್ಷಕರ ದಿನಾಚರಣೆ | ‘ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನದ ಮನೋಜ್ ಕಡಬ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

Date:

Advertisements

‘ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿರುವ, ವಿದ್ಯಾರ್ಥಿಗಳಿಗೆ ನಾನಾ ರೀತಿಯಲ್ಲಿ ನೆರವು ನೀಡುತ್ತಿರುವ ಮನೋಜ್‌ ಅವರನ್ನು ‘ರಾಜ್ಯಮಟ್ಟದ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಅಂಬಲಪಾಡೊಯಲ್ಲಿ ಸೆಪ್ಟೆಂಬರ್‌ 5ರಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಒಗ್ಗೂಡಿಆಯೋಜಿಸಿರುವ ‘ಶಿಕ್ಷಕ ಸಾಹಿತಿಗಳ ಸಮ್ಮೇಳನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಮನೋಜ್ ಕಡಬ ಅವರು ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನವನ್ನು ಆರಂಭಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಕಾಯಕದಲ್ಲಿ ನಿರತಗಿದ್ದಾರೆ. ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಹಾಗೂ ಮಕ್ಕಳಿಗೆ ವರ್ಷ ಪೂರ್ತಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡುತ್ತಿದ್ದಾರೆ. ಸರ್ಕಾರಿ ಶಾಸಲೆಗಳ ಮಕ್ಕಳು ಇಂಗ್ಲಿಷ್‌ನಲ್ಲಿ ಮಾತನಾಡುವುದನ್ನು ಕಾಣುವ ನೆರೆಮನೆಯ ಮಕ್ಕಳೂ ಕನ್ನಡ ಮಾಧ್ಯಮ ಶಾಲೆಗಳತ್ತ ಆಕರ್ಷಿತರಾಗುವಂತೆ ಮಾಡುತ್ತಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜಿಲ್ಲಾಡಳಿತ ನೀತಿಯಿಂದ ಬಡವರ ಮನೆ ನಿರ್ಮಾಣದ ಕನಸು ನುಚ್ಚುನೂರು!

ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಯಿಂದ ಜಿಲ್ಲೆಯಲ್ಲಿರುವ ಸಾಮಾನ್ಯ...

ಉಡುಪಿ | ಮೋಟಾರೀಕೃತ ನಾಡದೋಣಿಗೆ ಸೀಮೆಎಣ್ಣೆ ರಹದಾರಿ ನೀಡಲು ದೋಣಿಗಳ ಭೌತಿಕ ತಪಾಸಣೆ

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟಾರೀಕೃತ ನಾಡದೋಣಿಗಳನ್ನು ಭೌತಿಕವಾಗಿ...

ಉಡುಪಿ | ಬಾಲ್ಯವಿವಾಹ ಪದ್ಧತಿ ನಿಷೇಧ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಪೊಲೀಸ್ ಅಧೀಕ್ಷಕ ಡಿ.ಟಿ ಪ್ರಭು ಸೂಚನೆ

ಸಾಮಾಜಿಕ ಪಿಡುಗಾಗಿರುವ ಬಾಲ್ಯವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಜಾರಿಗೊಳಿಸಲಾದ ಕಾಯಿದೆ ಹಾಗೂ...

Download Eedina App Android / iOS

X