ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ

Date:

Advertisements
  • ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಚಟುವಟಿಕೆ ಆರಂಭ
  • ಸಂಶೋಧನಾ ವಿದ್ಯಾರ್ಥಿಗಳಿಂದ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿ ಸ್ಥಾಪನೆ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಮುಂಭಾಗದಲ್ಲಿ ಅದೇ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಸೋಮವಾರ ಡಾ. ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ಮಾಡಿದರು.

ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿ ನಂದಕುಮಾರ ಮಾತನಾಡಿ, ” ಬಾಬಾ ಸಾಹೇಬರು ರಚಿತ ಸಂವಿಧಾನದ ಅಡಿಯಲ್ಲಿ ಸ್ಥಾಪಿತವಾದ ಶಿಕ್ಷಣ ಸಂಸ್ಥೆಯಾಗಿದೆ. ಆದರೆ ಅನೇಕ ದಿನಗಳಿಂದ ವಿಶ್ವವಿದ್ಯಾಲಯದಲ್ಲಿ ಸಂಘ ಪರಿವಾರದ ಚಟುವಟಿಕೆಗಳು ನಡೆಯುತ್ತಿವೆ,‌ ಕೋಮುವಾದಿ ಸಂಘಟನೆಗಳ ಕೇಂದ್ರ ಕಚೇರಿಯಾಗಿ ಕೆಲಸ ಮಾಡುತ್ತಿದ್ದು, ಆರ್ ಎಸ್ ಎಸ್ ಪರೇಡ್‌ ಮಾಡುವುದು, ರಾಮನವಮಿ ಆಚರಣೆ , ಹನುಮಾನ್ ಚಾಲೀಸಾ ಪಠಣ ನಡೆಯುತ್ತಿದೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇತ್ತೀಚೆಗೆ ಮಂಗಳೂರಿನಿಂದ ಎಬಿವಿಪಿ ಮುಖಂಡರೊಬ್ಬರನ್ನು ಅನಧಿಕೃತವಾಗಿ ಆಹ್ವಾನಿಸಿ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಿ ನಂತರ ಸರಸ್ವತಿಯ ಕಂಚಿನ ಮೂರ್ತಿ ಗ್ರಂಥಾಲಯದ ಒಳಗಡೆ ಪ್ರತಿಷ್ಠಾಪಿಸಿದರು. ಈ ವಿಶ್ವವಿದ್ಯಾಲಯವನ್ನು ಧಾರ್ಮಿಕ ಕೇಂದ್ರವಾಗಿ ರೂಪಿಸುವ ಎಲ್ಲಾ ಕಾರ್ಯಗಳು ಇಲ್ಲಿ ನಡೆದವು, ಅದನ್ನು ವಿರೋಧಿಸಿ ಪ್ರತಿರೋಧವಾಗಿ ನಾವು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಡಿ ಸ್ಥಾಪಿತವಾದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆ ಮಾಡಿದ್ದೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಇತರೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X