ಉದಯನಿಧಿ ಸ್ಟಾಲಿನ್‌ ಹೇಳಿಕೆ ಸುತ್ತ ಪ್ರಿಯಾಂಕ್‌ ಖರ್ಗೆ, ಬಿ ಎಲ್‌ ಸಂತೋಷ್‌ ನಡುವೆ ಟ್ವೀಟ್‌ ಸಮರ

Date:

Advertisements
  • ಹೊಟ್ಟೆಯಲ್ಲಿ ಸೋಂಕು ಇದ್ದರೆ ತಲೆಯನ್ನು ಕತ್ತರಿಸುತ್ತೀರಾ? ಬಿ ಎಲ್‌ ಸಂತೋಷ್‌
  • ಬಿ ಎಲ್‌ ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ: ಖರ್ಗೆ

ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಲ್ಲಿ ಈ ವಿಚಾರವಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ನಡುವೆ ಟ್ವೀಟ್‌ ಸಮರಕ್ಕೂ ಈ ವಿವಾದ ಸಾಕ್ಷಿಯಾಗಿದೆ.

ಉದಯನಿಧಿ ಸ್ಟಾಲಿನ್‌ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಪ್ರಿಯಾಂಕ್‌ ಖರ್ಗೆ ಅವರಿಗೆ ಬಿ ಎಲ್‌ ಸಂತೋಷ್‌ ಟ್ವೀಟ್‌ ಮಾಡಿ, “ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ ತಲೆಯನ್ನು ಕತ್ತರಿಸುತ್ತೀರಾ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಬಸವಣ್ಣನವರ ವಚನಗಳ ಮೂಲಕ ಪ್ರಿಯಾಂಕ್‌ ಖರ್ಗೆ ಉತ್ತರಿಸಿದ್ದಾರೆ.

“ಸಮಾನತೆಯನ್ನು ಉತ್ತೇಜಿಸದ ಅಥವಾ ಮಾನವನ ಘನತೆಯನ್ನು ಖಚಿತಪಡಿಸಿಕೊಳ್ಳದ ಯಾವುದೇ ಧರ್ಮ ನನ್ನ ಪ್ರಕಾರ ಧರ್ಮವಲ್ಲ. ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮವು ರೋಗದಷ್ಟೇ ಕೆಟ್ಟದ್ದು” ಎಂದು ಪ್ರಿಯಾಂಕ್ ಖರ್ಗೆ ಮೊದಲು ಪ್ರತಿಕ್ರಿಯಿಸಿದ್ದರು.

Advertisements

ಇದಕ್ಕೆ ಬಿ ಎಲ್ ಸಂತೋಷ್ ತಿರುಗೇಟು ನೀಡಿ, ‘ಹಾಗಾದರೆ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕು ಇದ್ದರೆ, ನೀವು ತಲೆಯನ್ನು ಕತ್ತರಿಸುತ್ತೀರಾ?’ ಎಂದು ಪ್ರಶ್ನಿಸಿದ್ದಾರೆ.

ಮರಳಿ ಪ್ರಿಯಾಂಕ್‌ ಖರ್ಗೆ ಅವರು ಟ್ವೀಟ್‌ ಮಾಡಿ, “ಬಿ ಎಲ್‌ ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ? ಅಷ್ಟು ಸಾಕು” ಎಂದಿದ್ದಾರೆ.

ಮುಂದುವರಿದು, “ದಯೆಯಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂದು ಟ್ವೀಟ್‌ ಮಾಡಿದ್ದಾರೆ.

“ಬಿ ಎಲ್‌ ಸಂತೋಷ್‌ ಅವರೇ ಟ್ರೀಟ್‌ ಮೆಂಟ್‌ ಮಾಡಬೇಕಾದ ಒಂದು ಸೋಂಕು ಇರುವುದನ್ನು ಒಪ್ಪಿಕೊಂಡಿರುವುದು ಸಂತೋಷದ ಸಂಗತಿ ಎಂದಿದ್ದಾರೆ. ಕಳೆದ ಸಾವಿರಾರು ವರ್ಷಗಳಿಂದ ಹಲವಾರು ಸೋಂಕುಗಳು ಇದ್ದವು. ಈಗಲೂ ನಮ್ಮ ನಡುವೆ ಅವುಗಳು ಇವೆ. ಮನುಷ್ಯರ ನಡುವೆ ತಾರತಮ್ಯ ಮಾಡುವ ಸೋಂಕು, ಮನುಷ್ಯರಾಗಿ ಗೌರವವನು ನೀಡದ ಸೋಂಕು” ಎಂದು ಪ್ರಿಯಾಂಕ್‌ ಹೇಳಿದ್ದಾರೆ.

“ನಾನು ನಿಮ್ಮಷ್ಟು ಬುದ್ಧಿವಂತನಲ್ಲ. ಹೀಗಾಗಿ ಕೆಲವು ವಿಚಾರಗಳಿಗೆ ಸಂಬಂಧಿಸಿ ನನಗೆ ಜ್ಞಾನ ಕೊಡಿ” ಎಂದು ಪ್ರಿಯಾಂಕ್‌ ಖರ್ಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

  • ಸಮಾಜದಲ್ಲಿ ಈ ನಿಯಮಗಳನ್ನು ಮಾಡಿದವರು ಯಾರು?
  • ಕೆಲವರಿಗೆ ಇತರರಿಗೆ ಹೆಚ್ಚು ಹಕ್ಕುದಾರಿಕೆ ಸಿಗಲು ಕಾರಣವಾಗಿದ್ದು ಏನು?
  • ನಮ್ಮನ್ನು ಜಾತಿಯ ಆಧಾರದಲ್ಲಿ ವಿಭಜನೆ ಮಾಡಿದವರು ಯಾರು?
  • ಕೆಲವು ಮನುಷ್ಯರು ಯಾಕೆ ಅಸ್ಪೃಶ್ಯರು?
  • ಅವರು ಇವತ್ತಿಗೂ ದೇವಸ್ಥಾನ ಪ್ರವೇಶಿಸುವಂತಿಲ್ಲ ಯಾಕೆ?
  • ಮಹಿಳೆಯರನ್ನು ಕೀಳಾಗಿ ಕಾಣುವ ಪದ್ಧತಿಗಳನ್ನು ಆರಂಭ ಮಾಡಿದ್ದು ಯಾರು?
  • ಅಸಮಾನತೆ ಮತ್ತು ದಮನಕಾರಿ ನೀತಿಗೆ ಕಾರಣವಾದ ಸಾಮಾಜಿಕ ಸ್ವರೂಪ ಆಧರಿತ ಜಾತಿ ಪದ್ಧತಿಯನ್ನು ಜಾರಿಗೆ ತಂದವರು ಯಾರು?

“ಇಲ್ಲಿ ಯಾರೂ ತಲೆ ಕಡಿಯಿರಿ ಎಂದು ಹೇಳುತ್ತಿಲ್ಲ. ಈ ಸೋಂಕುಗಳನ್ನು ಸಮಾನ ಹಕ್ಕು ಮತ್ತು ಗೌರವಗಳ ಮೂಲಕ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಹೇಳುತ್ತಿದ್ದಾರೆ ಅಷ್ಟೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿರುವುದು ಸಂವಿಧಾನ ಮತ್ತು ನೀವು ಹಾಗೂ ನಿಮ್ಮ ಸಂಘಟನೆ ಅದಕ್ಕೆ ವಿರುದ್ಧವಾಗಿದ್ದೀರಿ” ಎಂದು ಕುಟುಕಿದ್ದಾರೆ.

“ಸಂತೋಷ್‌ ಜಿ ಅವರೇ ನೀವು ಕರ್ನಾಟಕದವರಿದ್ದೀರಿ. ದಯವಿಟ್ಟು ಗುರು ಬಸವಣ್ಣರ ಸಂದೇಶವನ್ನು ಪ್ರಚಾರ ಮಾಡಿ. ಇದರಿಂದ ನಮಗೆ ಸಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ” ಎಂದಿದ್ದಾರೆ.

“ಇವನಾರವ, ಇವನಾರವ, ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನೆಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂದು ಪ್ರಿಯಾಂಕ್ ಟ್ವೀಟ್ ಮುಗಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X