ಹಾವೇರಿ | ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಘೋಷಿಸಲಿ: ರೈತ ಸಂಘ ಒತ್ತಾಯ

Date:

Advertisements
  • ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ.
  • ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಬಂದಿದ್ದು, ಸರ್ಕಾರ ರೈತರ ಬೆಳೆ ಸಾಲ ಸೇರಿದಂತೆ ಸಂಪೂರ್ಣ ಸಾಲಮನ್ನಾ ಕೈಗೊಂಡು ರೈತರ ಜೀವದಾನಕ್ಕೆ ಮುಂದಾಗಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿಗ್ಗಾವಿ-ಸವಣೂರ ತಾಲೂಕು ಘಟಕದ ಕಾರ್ಯಕರ್ತರು ಒತ್ತಾಯಿಸಿದರು.

ಈ ಕುರಿತು ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಎಮ್.ಎನ್.ನಾಯ್ಕ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಶಿಗ್ಗಾವಿ-ಸವಣೂರ ಅಸಿಸ್ಟೆಂಟ್ ಕಮಿಷನರ್‌ ಅವರಿಗೆ ಸಲ್ಲಿಸಿದರು.

“ಬ್ಯಾಂಕ್ ಅಧಿಕಾರಿಗಳು, ಎಸ್ಕಾಂ ಇಲಾಖೆ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ರೈತರನ್ನು ಸಣ್ಣಪುಟ್ಟ ವಿಷಯಗಳಿಗೆ ಅಪರಾಧಿಗಳಂತೆ ಕಾಣುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ರೈತರ ಅಲ್ಪ ಪ್ರಮಾಣ ಸಾಲ ಮೊತ್ತ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ. ಕೂಡಲೇ ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

Advertisements

“ರೈತರ ಸಾಮೂಹಿಕ ಮನವಿಗೆ ಸ್ಪಂದಿಸಿ ಸರ್ವ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಗಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನದಲ್ಲಿ ಸರ್ಕಾರಕ್ಕೆ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸವಣೂರು ಕಂದಾಯ ಇಲಾಖೆ ಕಚೇರಿ ಎದುರುಗಡೆ ಸಾವಿರಾರು ರೈತರು ಸಮ್ಮುಖದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಬೇಡಿಕೆಗಳು:

  1. ಬರಗಾಲ ಘೋಷಣೆಯೊಂದಿಗೆ ರೈತರಿಗೆ ಆತ್ಮಸ್ಥೈರ್ಯಕ್ಕಾಗಿ ಬಿತ್ತನೆ ಖರ್ಚು ಘೋಷಣೆ ಮಾಡಬೇಕು.
  2. ಅನಾವೃಷ್ಟಿಯಿಂದ ಬೆಳೆ ಹಾನಿ ಉಂಟಾದ ಹಿನ್ನೆಲೆಯಲ್ಲಿ ಕೂಡಲೇ ಬೆಳೆ ವಿಮಾ ಘೋಷಿಸಬೇಕು.
  3. ಕೃಷಿ ಚಟುವಟಿಕೆಗಾಗಿ ನಿರಂತರ ಮೂರು ಫೇಸ್ ವಿದ್ಯುತ್ ಸರಬರಾಜಿಗೆ ಸೂಕ್ತ ಕ್ರಮ ಕೈಗೊಂಡು ಒಣಗುತ್ತಿರುವ ಬೆಳೆಗಳಿಗೆ ಜೀವಕಳೆ ತುಂಬಲು ಮುಂದಾಗಬೇಕು.
  4. ರೈತರ ಬೆಳೆ ಸಾಲ ಸೇರಿದಂತೆ ಸಂಪೂರ್ಣ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳುವ ಮೂಲಕ ರೈತರಿಗೆ ಜೀವದಾನ ನೀಡಬೇಕು.
  5. ಸಾಲ ವಸೂಲಾತಿಗಾಗಿ ನಿರಂತರ ಕಿರುಕುಳ ನೀಡುತ್ತಿರುವ ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುವುದು ಹಾಗೂ ರೈತರಿಗೆ ಸಾಲ ಮರುಪಾವತಿಗಾಗಿ ಸಮಯ ನೀಡಲು ಆದೇಶ ನೀಡಬೇಕು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

  1. ರೈತರ ಕೃಷಿ ಚಟುವಟಿಕೆಗಾಗಿ ಹಾಗೂ ವಿದ್ಯುತ್ ಸಂಪರ್ಕ ನೀಡಲು ಸತಾಯಿಸುತ್ತಿರುವ ಹೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಪಾರದರ್ಶಕವಾಗಿ ಸರ್ಕಾರದ ಫೀಸ್ ಮಾತ್ರ ಪಡೆದು ವಿದ್ಯುತ್ ಸಂಪರ್ಕ ನೀಡಲು ಆದೇಶಿಸಬೇಕು.
  2. ರೈತರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪ್ರವರ್ತಕ (ಟಿ ಸಿ) ನೀಡಲು ಸೂಚನೆ ನೀಡಬೇಕು.
  3. ಸರ್ಕಾರ ಹಾಗೂ ವಿವಿಧ ಇಲಾಖೆಯ ಮೆಲಾಧಿಕಾರಿಗಳು ರೈತರ ‌ ಅಹವಾಲು ಸ್ವೀಕಾರಕ್ಕಾಗಿ ಪ್ರತಿ ತಿಂಗಳು ಒಂದು ದಿನ ಸಮಯ ಮೀಸಲು ಇಡಬೇಕು. ಪ್ರತಿ ತಾಲೂಕು ಮಟ್ಟದಲ್ಲಿ ರೈತರ ಅಹವಾಲು ಸ್ವೀಕರಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X