ರಾಯಚೂರು | ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಆದೇಶ ಹಿಂಪಡೆಯಲು ಎಸ್‌ಎಫ್‌ಐ ಆಗ್ರಹ

Date:

Advertisements

ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಾಮಾನ್ಯ ವರ್ಗಾವಣೆ ಆದೇಶವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು ಎಂದು ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಜಾಲಹಳ್ಳಿ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿದರು.

“ಜಿಲ್ಲೆಯ 1,625 ಮಂಜೂರು ಹುದ್ದೆಗಳಿದ್ದು, ಪ್ರಸ್ತುತ 714 ಮಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದರು. ಆದರೆ ವರ್ಗಾವಣೆ ಪ್ರತಿಕ್ರಿಯೆಯಲ್ಲಿ 373 ಶಿಕ್ಷಕರು ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡಿದ್ದು, 341 ಮಂದಿ ಶಿಕ್ಷಕರು ಮಾತ್ರ ಇದೀಗ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯಲ್ಲಿ 48,150 ವಿದ್ಯಾರ್ಥಿಗಳು, ಶಿಕ್ಷಣ ಪಡೆಯುತ್ತಿದ್ದಾರೆ” ಎಂದು ಆಗ್ರಹಿಸಿದರು.

Advertisements

“ಒಂದು ವೇಳೆ ಸಾಮಾನ್ಯ ವರ್ಗಾವಣೆಯಲ್ಲಿ ಶಿಕ್ಷಕರು ಕರ್ತವ್ಯದಿಂದ ಬಿಡುಗಡೆಗೊಂಡರೆ ಮಕ್ಕಳ ಕಲಿಕಾ ಗುಣಮಟ್ಟ ತೀವ್ರ ಕುಂಠಿತಗೊಳ್ಳುತ್ತದೆ. ಮಕ್ಕಳು ಶಾಲೆಗೆ ಹೋಗದೆ ದುಡಿಯುವುದಕ್ಕೆ ಬೆಂಗಳೂರು ಪೂನಾದಂತಹ ನಗರ ಪ್ರದೇಶಗಳಿಗೆ ತಂದೆ ತಾಯಿ ಜೊತೆ ಹೋಗುತ್ತಾರೆ. ತಾಲೂಕಿನಲ್ಲಿ ಬಾಲಕಾರ್ಮಿಕತೆ ಹೆಚ್ಚಾಗುತ್ತಿದೆ. ಆದಕಾರಣ ಖಾಯಂ ಶಿಕ್ಷಕರು ನೇಮಕವಾಗುವವರೆಗೂ ಈ ಸಾಮಾನ್ಯ ವರ್ಗಾವಣೆ 2023ರ ಶಿಕ್ಷಕರ ಬಿಡುಗಡೆಯನ್ನು ತಡೆಹಿಡಿಯಬೇಕು” ಎಂದು ಒತ್ತಾಯಿಸಿದರು.

“ತಾಲೂಕಿನ 86 ಶಾಲೆಗಳಲ್ಲಿ ಶಿಕ್ಷಕ ಸಂಖ್ಯೆ ಶೂನ್ಯವಿದೆ. ಆ ಶಾಲೆಗಳ ಸ್ಥಿತಿ ಅಧಿಕಾರಿಗಳು ನಿರ್ವಹಣೆ ಮಾಡುತ್ತಾರೆ. ಎರವಲು ನೀಡಿದರೆ ಸರಿಯಾಗಿ ನಡೆಲು ಸಾಧ್ಯವಾಗುವುದಿಲ್ಲ. ಅತಿಥಿ ಶಿಕ್ಷಕರ ಮೇಲೆಯೇ ಶಾಲೆ ನಡೆಸುವುದು ಎಷ್ಟು ಸರಿ” ಎಂದು ಹೋರಾಟಗಾರರು ಪ್ರಶ್ನಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ, ಸಿಪಿಐ ಗುಂಡುರಾವ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಅದೇಶದ ಪ್ರಕಾರ ವರ್ಗಾವಣೆಯಾಗಿದೆ. ಅದರೆ, ಮುಂದಿನ ಅದೇಶದವರೆಗೆ ಯಾವುದೇ ಶಿಕ್ಷಕರನ್ನು ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಸಹಿಷ್ಣುತೆ ದೇಶವನ್ನು ಆಳುತ್ತಿದೆ: ಶೈಲಜಾ ಟೀಚರ್

ಹೋರಾಟಗಾರರು ಡಿಡಿಪಿಐ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟುಹಿಡಿದು‌ ಹೋರಾಟ ಮುಂದುವರಿಸಿದ್ದಾರೆ.
ಒಂದು ವೇಳೆ ನೀವು ಅವರನ್ನು ಬಿಡುಗಡೆಗೊಳಿಸಿದರೆ ತೀವ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡ ಶಬ್ಬೀರ್ ಜಾಲಹಳ್ಳಿ, ಎಸ್‌ಎಫ್‌ಐ ಮುಖಂಡ ಮಹಾಲಿಂಗ ದೊಡ್ಡಮನಿ, ನರಸಣ್ಣ ನಾಯಕ, ರಮೇಶ್ ವೀರಾಪುರ, ಭೀಮಣ್ಣ, ಬಸವರಾಜ್ ಗೋಪಳಪುರ, ರಾಜಶೇಖರ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X