ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್: ಮೋದಿ ಪ್ರವಾಸದ ಆಹ್ವಾನ ಪತ್ರ ಹಂಚಿಕೊಂಡ ಬಿಜೆಪಿ ವಕ್ತಾರ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು 20 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂಡೋನೇಷ್ಯಾಗೆ ಭೇಟಿ ನೀಡುತ್ತಿದ್ದು, ‘ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂಬ ಅಧಿಕೃತ ಆಹ್ವಾನ ಪತ್ರವನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಮಾಹಿತಿಯಲ್ಲಿ ನರೇಂದ್ರ ಮೋದಿ ಅವರನ್ನು “ಭಾರತದ ಪ್ರಧಾನಿ” ಎಂದು ಉಲ್ಲೇಖಿಸಲಾಗಿದೆ.

ಇದಲ್ಲದೆ, ಆಗಸ್ಟ್ 22-25 ರಂದು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ತೆರಳಿದ್ದ ಅವರ ಇತ್ತೀಚಿನ ಭೇಟಿಯ ಸಂದರ್ಭದಲ್ಲಿ ಸಮಾರಂಭದ ಪತ್ರಗಳಲ್ಲಿ ಮೋದಿ ಅವರನ್ನು ‘ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂದು ಉಲ್ಲೇಖಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಭಾರತ, ಟರ್ಕಿಯಲ್ಲಿ ನಕಲಿ ಯಕೃತ್ತಿನ ಔಷಧಿ ಮಾರಾಟ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Advertisements

20ನೇ ಆಸಿಯಾನ್‌ – ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು(ಆಗಸ್ಟ್ 6) ರಾತ್ರಿ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿಯವರನ್ನು ‘ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂದು ಹೇಳುವ ಮೊದಲು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿ20 ಔತಣಕೂಟಕ್ಕೆ ಕಳುಹಿಸಿದ ಆಮಂತ್ರಣ ಪತ್ರದಲ್ಲಿ ‘ದಿ ಪ್ರೆಸಿಡೆಂಟ್ ಆಫ್‌ ಭಾರತ್’ ಎಂದು ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 18ರಂದು ಬಿಜೆಪಿ ಸರ್ಕಾರ 5 ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನವನ್ನೂ ಕರೆದಿದೆ. ಮುಂಬರುವ ವಿಶೇಷ ಅಧಿವೇಶನದಲ್ಲಿ ಇಂಡಿಯಾ ಹೆಸರನ್ನು ಭಾರತ ಎಂದು ಬದಲಾಯಿಸಲಾಗುವುದಕ್ಕೆ ಈ ಆಹ್ವಾನ ಪತ್ರಗಳು ಮತ್ತಷ್ಟು ಪುಷ್ಟಿ ನೀಡಿವೆ.

ಇಂಡೋನೇಷ್ಯಾ ಆತಿಥ್ಯ ವಹಿಸುತ್ತಿರುವ 20 ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18 ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಅವರು ಸೆಪ್ಟೆಂಬರ್ 6-7 ರಂದು ಎರಡು ದಿನಗಳ ಭೇಟಿಗಾಗಿ ಜಕಾರ್ತಾಕ್ಕೆ ಭೇಟಿ ನೀಡುತ್ತಿದ್ದಾರೆ.

ಜಿ-20 ಶೃಂಗಸಭೆ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದ್ದು, ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಭಾರತಕ್ಕೆ ಮರಳಲಿದ್ದಾರೆ. ಇಂಡೋನೇಷ್ಯಾ G20 ‘ತ್ರಿಲೋಕ’ದ ಭಾಗವಾಗಿದೆ ಮತ್ತು ಕಳೆದ ವರ್ಷ ಜಿ20 ಗುಂಪಿನ ಅಧ್ಯಕ್ಷತೆ ವಹಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X