ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆ ಅವಧಿ ವಿಸ್ತರಣೆ

Date:

Advertisements
  • ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಮ್ಮೆ ಅವಧಿ ವಿಸ್ತರಣೆ
  • ಸೆಪ್ಟೆಂಬರ್ 09 ರಿಂದ 14 ರೊಳಗೆ ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ

ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಮ್ಮೆ ವಿಸ್ತರಿಸಿದ್ದು, ಸೆಪ್ಟೆಂಬರ್ 14ವರೆಗೂ ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಯಜಮಾನರ ಸ್ಥಾನದಲ್ಲಿ ಮಹಿಳೆಯರು ಹೆಸರಿಲ್ಲದ ಕಾರಣ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕದ ಮಹಿಳೆಯರಿಗೆ ಮತ್ತೆ ಅವಕಾಶ ಸಿಕ್ಕಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟ್ ಮಾಡಿದ್ದು, “ಪಡಿತರ ಚೀಟಿಯಲ್ಲಿ ತಿದ್ದುಪಡಿ/ಸೇರ್ಪಡೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಗೃಹ ಲಕ್ಷ್ಮಿಯೋಜನೆಗೆ ನೋಂದಾಯಿಸಿಕೊಳ್ಳದವರು ಸೆಪ್ಟೆಂಬರ್ 09 ರಿಂದ 14 ರೊಳಗೆ ಯಜಮಾನಿಯ ಸ್ಥಾನದಲ್ಲಿ ತಿದ್ದುಪಡಿ ಮಾಡಿಕೊಂಡು, ಯೋಜನೆಗೆ ನೋಂದಾಯಿಸಿ ಸೌಲಭ್ಯ ಪಡೆಯಬಹುದಾಗಿದೆ’ ಎಂದು ಇಲಾಖೆ ತಿಳಿಸಿದೆ.

“ಗೃಹ ಲಕ್ಷ್ಮಿಯೋಜನೆಯಡಿ ಈಗಾಗಲೇ ನೋಂದಾಯಿಸಿ ರೇಷನ್ ಕಾರ್ಡ್ ನಲ್ಲಿ ಯಜಮಾನಿ ಹೆಸರು ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಅರ್ಜಿ ಇತ್ಯರ್ಥಗೊಳ್ಳುವವರೆಗೂ ಗೃಹಲಕ್ಷ್ಮಿಯೋಜನೆಯ ಲಾಭ ತಡೆಹಿಡಿಯಲಾಗುತ್ತದೆ” ಎಂದು ಇಲಾಖೆ ಮಾಹಿತಿ ನೀಡಿದೆ.

Advertisements

ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೇಷನ್ ಕಾರ್ಡ್ ತಿದ್ದುಪಡಿಗೆ ಸೆಪ್ಟೆಂಬರ್ 1 ರಿಂದ 10ವರೆಗೂ ಮಾತ್ರ ಕಾಲಾವಕಾಶ ನೀಡಲಾಗಿತ್ತು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X