ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

Date:

Advertisements
  • ಸಾರಿಗೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ 17 ಕೋಟಿ ರೂ. ಮೀಸಲು
  • ‘ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ’

ಸಾರಿಗೆ ಸಿಬ್ಬಂದಿಯ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ಕೊಡಲಾಗಿತ್ತು. ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿ ಮಾತನಾಡಿದ ಅವರು, “ರಾಜ್ಯ ಸಾರಿಗೆ ಇಲಾಖೆಯಿಂದ ಇನ್ನು ಎರಡ್ಮೂರು ತಿಂಗಳಲ್ಲಿ ಅಗ್ರಿಗೇಟರ್ ಆ್ಯಪ್ ಬಿಡುಗಡೆ ಮಾಡುತ್ತೇವೆ. ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಕೇಳಿದ್ದಾರೆ. ಅದನ್ನು ನೀಡಲು 4,370.28 ಕೋಟಿ ಬೇಕಾಗುತ್ತದೆ” ಎಂದು ಹೇಳಿದರು.

“ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ. ಇನ್ನು ಸಾರಿಗೆ ಅಭಿವೃದ್ದಿ ನಿಗಮ ಸ್ಥಾಪನೆಗೆ ಕೋರಿದ್ದಾರೆ” ಎಂದರು.

Advertisements

“ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಕೋರಿಕೆ ಇಟ್ಟಿದ್ದಾರೆ‌. ಹಣಕಾಸಿನ ವಿಚಾರ ಆಗಿರುವುದರಿಂದ ಅದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ತೆರಿಗೆ ವಿನಾಯಿತಿ ಕೇಳಿದ್ದಾರೆ. ನಾವು ಕೊಟ್ಟರೆ ಬೇರೆ ರಾಜ್ಯದಲ್ಲೂ ನೀಡಬೇಕು. ಮುಂದೆ ನೋಡೋಣ” ಎಂದು ವಿವರಿಸಿದರು.

ಸೆ.11 ಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಬಂದ್ ಕರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ಬಂದ್ ಮಾಡುವವರು ಬೇಕಿದ್ದರೆ ಬಂದು ಮಾತನಾಡಲಿ. ಸಾರಿಗೆ ಕಚೇರಿ ಬಾಗಿಲು ಯಾವಾಗಲೂ ತೆರೆದಿರುತ್ತೆ. ಸಭೆ ಕರೆದಾಗ ಬಂದು‌ ಸಿಎಂ ಜೊತೆಗೆ ಮಾತನಾಡದೆ ಬಂದ್ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಜರುಗಿಸಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲದಲ್ಲೂ ಸರ್ಕಾರ ಸಚಿವರಿಗಾಗಿ ಐಷಾರಾಮಿ ಕಾರು ಕೊಳ್ಳುವ ಅಗತ್ಯವಿತ್ತೇ?

“ಖಾಸಗಿ ವಾಹನಗಳನ್ನು ಕಿಮೀ ಆದಾರದ ಮೇಲೆ ಸರ್ಕಾರವೇ ಬಾಡಿಗೆಗೆ ಪಡೆಯಬೇಕು ಎಂದು ಕೇಳಿದರು. ಅವಶ್ಯಕತೆಗೆ ತಕ್ಕಂತೆ ಪಡೆಯುತ್ತೇವೆ, ಆದರೆ ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಬೇಕಿದೆ. ಟೂರಿಸ್ಟ್ ಮತ್ತು ಕಂಟ್ರಾಕ್ಟ್ ಕ್ಯಾರೇಜು ಬಸ್ಸುಗಳಿಗೆ ರಸ್ತೆ ತೆರಿಗೆ ಕಡಿತಗೊಳಿಸಲು ಸಿಎಂ ತೀರ್ಮಾನ ತೆಗೆದುಕೊಳ್ಳಬೇಕು. ಟ್ಯಾಕ್ಸಿ, ಮ್ಯಾಕ್ಸಿ ಹಾಗೂ ಒಪ್ಪಂದ ವಾಹನಗಳಿಗೆ ವಿಶೇಷ ರಹದಾರಿ ನೀಡುವ ಬಗ್ಗೆ ವ್ಯವಸ್ಥೆ ಮಾಡಲಾಗುತ್ತದೆ” ಎಂದು ಭರವಸೆ ನೀಡಿದರು.

“ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಮಾಡಲಾಗುತ್ತದೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಜೊತೆ ಮಾತನಾಡಲಾಗಿದೆ. ಇ-ಆಟೋಗಳಿಗೆ ರಹದಾರಿ ಕುರಿತು ಪತ್ರ ಬರೆಯಲಾಗಿದೆ. ಜೀವಾವಧಿ ಟ್ಯಾಕ್ಸ್ ಅನ್ನು ಲೈಫ್ ಟ್ಯಾಕ್ಸ್ ಬೇಡ, ಮೊದಲಿನಂತೆ ಮಾಡುವಂತೆ ಕೋರಿದ್ದಾರೆ. ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X