ಬೀದರ್‌ | ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಸರಿಪಡಿಸಲು ಭೀಮ್‌ ಆರ್ಮಿ ಒತ್ತಾಯ

Date:

Advertisements
  • ಇಂದಿರಾ ಕ್ಯಾಂಟೀನ್‌ ನಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಇಲ್ಲ.
  • ಸ್ವಲ್ಪ ಮಳೆ ಬಂದರೆ ಕಟ್ಟಡದ ಮೇಲ್ಛಾವಣಿ ಸೋರುತ್ತದೆ

ಬೀದರ್ ನಗರದ ಸರ್ಕಾರಿ ಬೀಮ್ಸ್ ಆಸ್ಪತ್ರೆ ಮುಂಭಾಗದ ಇಂದಿರಾ ಕ್ಯಾಂಟೀನ್ ನಲ್ಲಿ ಮೂಲಭೂತ ಸೌಕರ್ಯ ಕೊರತೆಯಿದ್ದು, ಸಾರ್ವಜನಿಕರಿಗೆ ಗುಣಮಟ್ಟ ಆಹಾರ ಒದಗಿಸುತ್ತಿಲ್ಲ ಎಂದು ಭೀಮ್‌ ಆರ್ಮಿ ಜಿಲ್ಲಾ ಗೌರವಾಧ್ಯಕ್ಷ ಘಾಳೆಪ್ಪಾ ಲಾಧಾಕರ್‌ ಆರೋಪಿದರು.

“ಬ್ರಿಮ್ಸ್‌ ಆಸ್ಪತ್ರೆಗೆ ಬರುವ ರೋಗಿಗಳಿಗೆ, ಬಡ ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಿಯಾತಿತಿ ದರದಲ್ಲಿ ಉಪಾಹಾರ ಒದಗಿಸಲು ಆರಂಭಿಸಿದ ಇಂದಿರಾ ಕ್ಯಾಂಟೀನ್‌ ನಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಸೇರಿದಂತೆ ರುಚಿಕರವಾಸ ಗುಣಮುಟ್ಟ ಆಹಾರ ನೀಡದೇ ʼನಾಮ್‌ ಕೇ ವಾಸ್ತೆʼ ತೆರದಿಡಲಾಗುತ್ತಿದೆ” ಎಂದು ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಶಕ ಕಳೆದರೂ ಈ ಊರಿನ ರಸ್ತೆಗಿಲ್ಲ ದುರಸ್ತಿ ಭಾಗ್ಯ; ನಿತ್ಯ ಸಂಕಟದಲ್ಲಿ ಗ್ರಾಮಸ್ಥರು

Advertisements

” ಸ್ವಲ್ಪ ಮಳೆ ಬಂದರೆ ಕಟ್ಟಡದ ಮೇಲ್ಛಾವಣಿ ಸೋರುತ್ತದೆ, ಕ್ಯಾಂಟೀನ್‌ ತುಂಬಾ ಮಳೆ ನೀರು ಸಂಗ್ರಹವಾಗಿ ಗಬ್ಬು ನಾರುತ್ತಿದೆ, ಇನ್ನು ಕ್ಯಾಂಟೀನ್‌ ಪಕ್ಕದಲ್ಲೇ ಸಾರ್ವಜನಿಕ ಶೌಚಾಲಯ ಇರುವ ಕಾರಣದಿಂದ ಉಪಹಾರ ಸೇವಿಸಲು ಬರುವರಿಗೆ ರೋಗದ ಭೀತಿ ಎದುರಾಗುತ್ತಿದೆ. ಇಂಥ ಅವ್ಯಸ್ಥೆಯ ಇಂದಿರಾ ಕ್ಯಾಂಟೀನ್‌ ನಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಗುಣಮಟ್ಟ ಆಹಾರ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕು” ಎಂದು ನಗರಸಭೆ, ಜಿಲ್ಲಾಡಳಿತಕ್ಕೆ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X