ದಾವಣಗೆರೆ | ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಬೇಕು; ರೈತರ ಆಗ್ರಹ

Date:

Advertisements

ನೀರಾವರಿ ಇಲಾಖೆ ಕೊಟ್ಟ‌ ಮಾತಿನಂತೆ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನಿರಂತರ ನೀರು ಹರಿಸಬೇಕು. ಮುಂಗಾರು ಹಂಗಾಮಿನ ನೀರು ಹರಿಸುವುದನ್ನು ನಿಲ್ಲಿಸುವ ಸಲುವಾಗಿಯೇ ಗುರುವಾರದಂದು ಕಾಡಾ ಸಭೆ ಕರೆದಿದ್ದಾರೆ ಎಂದು ಭಾರತೀಯ ರೈತ ಒಕ್ಕೂಟದ ರೈತ ಮುಖಂಡರು ಆರೋಪಿಸಿದರು.

ಕಾಡಾ ಸಭೆ ವಿರೋಧಿಸಿ ದಾವಣಗೆರೆಯಲ್ಲಿ ಪ್ರತಿಭಟಿಸಿದ ರೈತರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, “ಈ ಸಭೆ ರದ್ದುಪಡಿಸದಿದ್ದರೆ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಭದ್ರಾ ಜಲಾಶಯ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ರೈತರ ಬೆಳೆಗೆ ಮುಖ್ಯ ನೀರಿನ ಮೂಲ. ನಿರಂತರ ನೂರು ದಿನಗಳ ಕಾಲ ಮುಂಗಾರು ಹಂಗಾಮಿನ ನೀರು ಹರಿಸುವುದಾಗಿ ನೀರಾವರಿ ಇಲಾಖೆ ಭರವಸೆ ನೀಡಿತ್ತು. ಇದೀಗ ಚನ್ನಗಿರಿ, ಶಿವಮೊಗ್ಗ, ಭದ್ರಾವತಿಯ ತೋಟಗಾರಿಕೆ ಬೆಳೆಯ ರೈತರ ಒತ್ತಡದಿಂದ ನೀರು ನಿಲ್ಲಿಸಲು ಸಭೆ ಕರೆಯಲಾಗಿದೆ” ಎಂದು ಆರೋಪಿಸಿದರು.

Advertisements

“ನೀರು ಹರಿಸಲು ಪ್ರಾರಂಭವಾಗಿ 25 ದಿನ ಕಳೆದಿದ್ದು, ಉಳಿದ 75 ದಿನಗಳ ಕಾಲವೂ ನೀರು ಹರಿಸಬೇಕು. ಈಗಾಗಲೇ ರೈತರು ತಮ್ಮ ಜಮೀನುಗಳಲ್ಲಿ ಭತ್ತ ನಾಟಿ ಮಾಡಿದ್ದು, ಕಾಡಾದಿಂದ ನೀರು ನಿಲ್ಲಿಸಲು ಇದೀಗ ಸಭೆ ಕರೆದಿರುವುದು ರೈತರು ಹೋರಾಟಕ್ಕಿಳಿಯುವಂತೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ವಂಚನೆ; ಭೂರಹಿತರ ಆರೋಪ

“ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರೈತರು ಅಕ್ರಮ ಪಂಪ್‌ಸೆಟ್ ಹಾಕಿಕೊಂಡಿದ್ದು, ಅಡಿಕೆ ತೋಟಗಳಿಗೆ ನೀರು ಹರಿಸುತ್ತಿದ್ದಾರೆ. ಆದರೆ, ದಾವಣಗೆರೆ ಭಾಗದ ಭತ್ತ ಬೆಳೆದ ರೈತರು ನೀರಿಲ್ಲದೇ ಪರದಾಡುತ್ತಿದ್ದಾರೆ. ಕಾಡಾ ಸಭೆಯನ್ನು ದಾವಣಗೆರೆ ರೈತರು ಬಹಿಷ್ಕಾರ ಮಾಡುತ್ತೇವೆ” ಎಂದು ಕಿಡಿಕಾರಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X