‘ಇಂಡಿಯಾ’ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ: ಡಿಎಂಕೆ ಸಚಿವರ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

Date:

Advertisements

ಸನಾತನ ಧರ್ಮ ನಿರ್ಮೂಲನೆ ಕುರಿತಾದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಸಂಸದ ಎ ರಾಜಾ ಹೇಳಿಕೆಗಳಿಗೆ ಕುರಿತಂತೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ ಎಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸರ್ಮ ಧರ್ಮಗಳ ಬಗ್ಗೆ ಸಮಾನ ಗೌರವದ ಭಾವನೆ ಹೊಂದಿದೆ. ಒಂದು ಧರ್ಮಕ್ಕಿಂತ ಮತ್ತೊಂದು ಧರ್ಮ ಕೀಳು ಎಂದು ಯಾರೊಬ್ಬರೂ ಭಾವಿಸಬಾರದು. ಅಂತಹ ಹೇಳಿಕೆಗಳನ್ನು ಕಾಂಗ್ರೆಸ್ ನಂಬುವುದಿಲ್ಲ ಎಂದು ತಿಳಿಸಿದ್ದಾರೆ.

ಇಂಡಿಯಾ ಒಕ್ಕೂಟದ ಪ್ರತಿಯೊಬ್ಬ ಸದಸ್ಯನೂ ಎಲ್ಲ ಸಮುದಾಯ, ಧರ್ಮ ಮತ್ತು ನಂಬಿಕೆಗಳ ಬಗ್ಗೆ ಗೌರವ ಹೊಂದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅನ್ನು ಸೋಲಿಸುವ ಉದ್ದೇಶದಿಂದ ವಿಪಕ್ಷಗಳು ರಚಿಸಿಕೊಂಡಿರುವ ‘ಇಂಡಿಯಾ’ ಒಕ್ಕೂಟದಲ್ಲಿ ಡಿಎಂಕೆ ಸಹ ಇದೆ ಎಂದು ಪವನ್ ಖೇರಾ ಹೇಳಿದ್ದಾರೆ.

Advertisements

ಇದೇ ವೇಳೆ, ಇಂಡಿಯಾ, ಭಾರತ್ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ಪವನ್ ಖೇರಾ, ಭಾರತ ಒಟ್ಟಾಗಿರುವುದನ್ನು ಕೆಲ ಶಕ್ತಿಗಳು ಸಹಿಸುವುದಿಲ್ಲ. ಹಾಗಾಗಿ, ಇಂಡಿಯಾ ಮತ್ತು ಭಾರತ ಎಂದು ಬಿರುಕು ಮೂಡಿಸುತ್ತಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

‘ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ, ಕೊರೊನಾ ರೋಗ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಉದಯನಿಧಿ ಹೇಳಿದ್ದರು.

ತಮಿಳುನಾಡಿನ ಸಂಸದ ಎ ರಾಜಾ, ಸನಾತನ ಧರ್ಮ ಎಚ್‌ಐವಿ, ಕುಷ್ಠ ರೋಗ ಇದ್ದಂತೆ. ಉದಯನಿಧಿ ಹೇಳಿಕೆ ಸರಿಯಾಗಿಯೆ ಇದೆ ಎಂದು ಸಮರ್ಥಿಸಿಕೊಂಡಿದ್ದರು.

ಉದಯನಿಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಇತರ ಸಚಿವರು ಪ್ರತಿಕ್ರಿಯಿಸಿದ ರೀತಿಯ ಕುರಿತು ತಮಿಳುನಾಡು ಸಿಎಂ ಸ್ಟಾಲಿನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಗೆ ಪತ್ರ ಬರೆದಿರುವ ಎಂ ಕೆ ಸ್ಟಾಲಿನ್, ನನ್ನ ಮಗ ಎಲ್ಲಿಯೂ ‘ಜನಾಂಗೀಯ ಹತ್ಯೆ’ ಪದವನ್ನು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ಬಳಸಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ದಬ್ಬಾಳಿಕೆಯ ತತ್ವಗಳ ವಿರುದ್ಧ ಉದಯನಿಧಿ ಅವರ ನಿಲುವನ್ನು ಸಹಿಸಲಾಗದ ಬಿಜೆಪಿ ಪರ ಶಕ್ತಿಗಳು ಸುಳ್ಳು ಸುದ್ದಿ ಹಬ್ಬಿಸಿ, ಸನಾತನ ಚಿಂತನೆಯುಳ್ಳ ಜನರ ಹತ್ಯೆಗೆ ಉದಯನಿಧಿ ಕರೆ ನೀಡಿದ್ದಾರೆ ಎಂದು ಸ್ಟಾಲಿನ್ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X