ಕಲಬುರಗಿ | ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಬಹುಮುಖ್ಯವಾಗಿತ್ತು : ಹನುಮಂತರೆಡ್ಡಿ

Date:

Advertisements
  • ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆ ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪಿಸಲಾಗಿದೆ
  • ಒಂದು ದೇಶ – ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು.

ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಭಾರತೀಯ ನ್ಯಾಯಾಂಗ ವ್ಯವಸ್ಥೆ ಸದೃಢಗೊಳಿಸಲು ನ್ಯಾಯಾಧೀಶರನ್ನು ಸಂಘಟಿಸಲು, ನ್ಯಾಯ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆಗಳು ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪನೆ ಆಗಿದೆ ಎಂದು ಅಧಿವಕ್ತಾ ಪರಿಷತ್ತಿನ ರಾಜ್ಯ‌ ಕಾರ್ಯದರ್ಶಿ ಹನುಮಂತರೆಡ್ಡಿ ಹೇಳಿದರು.

ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದ ಜೆ.ಎನ್.ಅರ್ ಲಡ್ಡಾ ಕಾನೂನು ಮಹಾವಿದ್ಯಾಲಯದಲ್ಲಿ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಕೀಲರಿಗೆ ತರಬೇತಿ, ನ್ಯಾಯಾಧೀಶರ ಪರೀಕ್ಷೆ ತರಬೇತಿ ಸೆರಿದಂತೆ ನಾಗರಿಕರಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ಅಧಿವಕ್ತಾ ಪರಿಷತ್ ಕಾರ್ಯ ಶ್ಲಾಘನೀಯ” ಎಂದರು.

ವಕೀಲ ಗಿರಿಷ್ ಕುಲಕರ್ಣಿ ಮಾತನಾಡಿ, “ಒಂದು ದೇಶ ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು. ಏಕರೂಪ ನಾಗರಿಕ ಸಂಹಿತೆಯಿಂದ‌ ಎಲ್ಲರಿಗೂ ಸಮಾನ ಅವಕಾಶಗಳು ಲಭಿಸುತ್ತವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪಾದಕರ ಬಾಯಿ ಬಡಿಯುವುದು ವಿಕಟ ವಿಡಂಬನೆ 

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಚಾರ್ಯ ಶರಣಗೌಡ ಪಾಟೀಲ ಅಧ್ಯಕ್ಷತೆ‌ ವಹಿಸಿದ್ದರು, ಉಪನ್ಯಾಸಕ ಶ್ರೀನಿವಾಸ ರೆಡ್ಡಿ ಪಾಟೀಲ ಸ್ವಾಗತಿಸಿದರು, ಶಾಂತಕುಮಾರ್ ವಂದಿಸಿದರು. ಈ ವೇಳೆ ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X