ಮಾಂಸಾಹಾರ ಸೇವನೆಯಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಐಐಟಿ ಪ್ರಾಧ್ಯಾಪಕ ವಿವಾದಾತ್ಮಕ ಹೇಳಿಕೆ

Date:

Advertisements

ಪ್ರಾಣಿಗಳ ಮೇಲಿನ ಕ್ರೌರ್ಯ ಹಾಗೂ ಅವುಗಳನ್ನು ಕೊಂದು ತಿನ್ನುತ್ತಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತಗಳು ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ ಎಂದು ಐಐಟಿ ಮಂಡಿ ನಿರ್ದೇಶಕ ಲಕ್ಷ್ಮೀಧರ್ ಬೆಹೆರಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಿಮ್ಲಾದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವು ಅಲ್ಲಿ ಮುಗ್ಧ ಪ್ರಾಣಿಗಳನ್ನು ಕಡಿಯುತ್ತಿದ್ದೀರಿ. ಅವುಗಳು ಸಹಜೀವನದ ಸಂಬಂಧವನ್ನು ಹೊಂದಿದ್ದು, ಅವುಗಳ ಹತ್ಯೆಯಿಂದ ಪರಿಸರದ ಅವನತಿಯಾಗುತ್ತಿದೆ. ನಾವು ಹೀಗೆಯೇ ಮಾಡಿದರೆ, ಹಿಮಾಚಲ ಪ್ರದೇಶವು ಗಮನಾರ್ಹವಾಗಿ ಅವನತಿ ಹೊಂದಲಿದೆ ಎಂದಿದ್ದಾರೆ.

ಅಲ್ಲದೆ, ತಾವು ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಲಕ್ಷ್ಮೀಧರ್ ಬೆಹೆರಾ ಸೂಚಿಸಿದ್ದಾರೆ.

Advertisements

ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಉಂಟಾದ ಭೀಕರ ಪ್ರವಾಹ ಮತ್ತು ಭೂಕುಸಿತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಹಿಂದೆಂದೂ ಕಾಣದ ರೀತಿಯಲ್ಲಿ ಈ ಬಾರಿ ಪ್ರಾಕೃತಿಕ ವಿಕೋಪ ಉಂಟಾಗಿತ್ತು. ತಜ್ಞರು ಈ ಭೀಕರ ದುರಂತಕ್ಕೆ ಅನೇಕ ವೈಜ್ಞಾನಿಕ ಕಾರಣಗಳನ್ನು ನೀಡುತ್ತಿದ್ದಾರೆ. ಆದರೆ ಐಐಟಿ ಮಂಡಿ ನಿರ್ದೇಶಕ ಲಕ್ಷ್ಮೀಧರ್ ಬೆಹೆರಾ ಮಾಂಸಾಹಾರ ಸೇವನೆಯಿಂದ ಹೀಗಾಗಿದೆ ಎಂಬ ವಿವಾದಾತ್ಮಕ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಹೆಸರಾಂತ ವ್ಯಂಗ್ಯಚಿತ್ರಕಾರ ಅಜಿತ್ ನಿನಾನ್‌ ಮೈಸೂರಿನಲ್ಲಿ ನಿಧನ

ಭೂಕುಸಿತಗಳು, ಮೇಘಸ್ಫೋಟಗಳು ಮತ್ತು ಇತರ ಹಲವು ಸಂಗತಿಗಳು ಮತ್ತೆ ಮತ್ತೆ ಘಟಿಸುತ್ತಿವೆ. ಇವೆಲ್ಲವೂ ಪ್ರಾಣಿಗಳ ಮೇಲಿನ ಕ್ರೌರ್ಯದ ಪರಿಣಾಮಗಳು. ಬೆಹೆರಾ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ನೆಟ್ಟಿಗರು ಲಕ್ಷ್ಮೀಧರ್ ಬೆಹೆರಾ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಡಿಯೋ ಕುರಿತು ಐಐಟಿ ಮಂಡಿಯ ಮೀಡಿಯಾ ಸೆಲ್‌ ಸದಸ್ಯರ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ಕಾರ್ಯಕ್ರಮದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಂಸಾಹಾರ ಸೇವನೆ ಮಾಡದಂತೆ ಹೇಳಿರುವುದು ನಿರ್ದೇಶಕರ ವೈಯಕ್ತಿಕ ಅಭಿಪ್ರಾಯವಾಗಿರಬಹುದು ಎಂದು ತಿಳಿಸಿದ್ದಾರೆ.

ಬೆಹೆರಾ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಅವರು ‘ಪವಿತ್ರ ಮಂತ್ರಗಳನ್ನು’ ಪಠಿಸುವ ಮೂಲಕ ತನ್ನ ಸ್ನೇಹಿತನ ಅಪಾರ್ಟ್‌ಮೆಂಟ್​​ನಿಂದ ಭೂತೋಚ್ಚಾಟನೆ ಮಾಡಿ ‘ದುಷ್ಟಶಕ್ತಿಗಳನ್ನು’ ನಿರ್ಮೂಲನಗೊಳಿಸುವ ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದೆ ಎಂದು ಹೇಳಿಕೊಂಡಿದ್ದು ಸುದ್ದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X