ಕೋಮುವಾದಿ ಪಕ್ಷದ ಜೊತೆ ಜೆಡಿಎಸ್‌ ಹೋಗುವುದು ಅಚ್ಚರಿ ತಂದಿದೆ: ಬಿಜೆಪಿ ಸಂಸದ ಬಚ್ಚೇಗೌಡ

Date:

Advertisements
  • ‘ಸ್ವಪಕ್ಷದ ವಿರುದ್ಧವೇ ಸಂಸದ ಬಿ ಎನ್ ಬಚ್ಚೇಗೌಡ ಟೀಕಾಪ್ರಹಾರ’
  • ‘ಬಿಜೆಪಿ ಜೆಡಿಎಸ್‌ ಜೊತೆ ಹೋಗಿ ಮತ್ತಷ್ಟು ಶಕ್ತಿ ಕಳೆದುಕೊಳ್ಳಲಿದೆ’

ಜಾತ್ಯತೀತ ಎನಿಸಿರುವ ಜೆಡಿಎಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಹೋಗುವುದು ಅಚ್ಚರಿಯಾಗಿದೆ ಎಂದು ಹೇಳುವ ಮೂಲಕ ಸ್ವಪಕ್ಷದ ವಿರುದ್ಧವೇ ಸಂಸದ ಬಿ ಎನ್ ಬಚ್ಚೇಗೌಡ ಟೀಕಾಪ್ರಹಾರ ನಡೆಸಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ. ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದುಕೊಂಡಿದ್ದೆ. ಅದು ಸುಳ್ಳಾಗುತ್ತಿದೆ” ಎಂದರು.

“ಜೆಡಿಎಸ್ ಮತ್ತು ಬಿಜೆಪಿ ಒಂದಾಗುತ್ತದೆ ಎನ್ನುವುದು ಜನರಿಗೆ ಗೋಪ್ಯದ ವಿಚಾರವಾಗಿತ್ತು. ಆದರೆ ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಲಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಅನಕೂಲಕ್ಕಿಂತ ಅನಾನುಕೂಲವೇ ಹೆಚ್ಚು. ಈ ಮೈತ್ರಿಯಿಂದ ಬಿಜೆಪಿಗೆ ಒಳ್ಳೆಯದಾಗುವುದಿಲ್ಲ. ಪಕ್ಷ ಮತ್ತಷ್ಟು ಶಕ್ತಿ ಕಳೆದುಕೊಳ್ಳಲಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ

ಜೆಡಿಎಸ್ ಮತ್ತು ಬಿಜೆಪಿ ಒಂದಾಗುವ ಕಾರಣದಿಂದಾಗಿಯೇ ಹೈಕಮಾಂಡ್ ನವರು ವಿರೋಧ ಪಕ್ಷದ ನಾಯಕನ ಆಯ್ಕೆಗೆ ತಡೆ ಮಾಡಿದ್ದಾರೆ ಅನ್ನಿಸುತ್ತಿದೆ. ದೊಡ್ಡ ಮಟ್ಟದ ನಾಯಕರು ಬಿಜೆಪಿಯಲ್ಲಿದ್ದಾರೆ. ಆದರೆ, ಹೈಕಮಾಂಡ್‌ ದೃಷ್ಟಿಯಲ್ಲಿ ಈಗ ಅವರೆಲ್ಲ ಕೆಲಸಕ್ಕೆ ಬಾರದ ನಾಯಕರು ಇರಬಹುದು” ಎಂದರು.

ಈ ಮೈತ್ರಿಯಿಂದ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಅನ್ನಿಸುತ್ತಿದೆ. ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಕೆಲವು ವಿಚಾರ ನೋಡಿಕೊಂಡು ಸುಮ್ಮನೇ ಕೂರಲು ಆಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X