ಜಿ20 ಶೃಂಗಸಭೆ | ಪ್ರಧಾನಿ ಮೋದಿ ಕುಳಿತ ಸ್ಥಳದಲ್ಲಿ ಪ್ರತ್ಯಕ್ಷಗೊಂಡ ‘ಭಾರತ್’ ಹೆಸರು

Date:

Advertisements

ವಿಶ್ವದ 20 ರಾಷ್ಟ್ರಗಳ ಗುಂಪಾದ ಜಿ20ಗೆ ಈ ವರ್ಷ ಭಾರತ ಆತಿಥ್ಯ ವಹಿಸುತ್ತಿದೆ. ಎರಡು ದಿನಗಳ ಜಿ20 ಶೃಂಗಸಭೆ ಇಂದು ದೆಹಲಿಯಲ್ಲಿ ಪ್ರಾರಂಭವಾಗಿದೆ.

ದೇಶದ ಹೆಸರು ಬದಲಾವಣೆಯ ಸುದ್ದಿ ಚರ್ಚೆಯ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿಯವರು ಕುಳಿತ ಸ್ಥಳದಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ್’ ಹೆಸರು ನಾಮಫಲಕದಲ್ಲಿ ಪ್ರತ್ಯಕ್ಷಗೊಂಡಿದೆ. ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯವರು ‘ಭಾರತ್’ ಅನ್ನು ಪ್ರತಿನಿಧಿಸುವ ನಾಯಕ ಎಂದು ಗುರುತಿಸಲಾಯಿತು.

ಸಭೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಎಲ್ಲ ನಾಯಕರನ್ನು ಸ್ವಾಗತಿಸಿದ ನಂತರ ಮೊರೋಕ್ಕೋದಲ್ಲಿ ಇಂದು ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದರು.

Advertisements

ಆ ಬಳಿಕ ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದರು. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾದಂತಾಗಿದೆ.

‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’​ ಮಂತ್ರವನ್ನು ಪಠಿಸಬೇಕಿದೆ ಎಂದ ಪ್ರಧಾನಿ ಮೋದಿ, ಭಯೋತ್ಪಾದನೆ, ಸೈಬರ್ ದಾಳಿ ಭೀತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚಿಂತಿಸಬೇಕಿದೆ ಎಂದು ಹೇಳಿದರು.

ಸೆಪ್ಟೆಂಬರ್ 9 ಮತ್ತು 10ರಂದು ಎರಡು ದಿನಗಳ ಕಾಲ ಜಿ20 ಒಕ್ಕೂಟದ ಸಭೆಯು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X