ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ‘ಮಹದಾಯಿಗೆ ಸಂಬಂಧಿಸಿದ ಎಲ್ಲ ವರದಿ ಕೇಂದ್ರಕ್ಕೆ ಕಳುಹಿಸಲಾಗಿದೆ’
  • ‘ಜೆಡಿಎಸ್, ಬಿಜೆಪಿಯ ಬಿ ಟೀಂ ಎಂದಾಗ ನನ್ನ ಮೇಲೆ ಸಿಟ್ಟಾಗಿದ್ದರು’
  • ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದರು.

ಜೆಡಿಎಸ್‌ಗೆ ಯಾವುದೇ ಸಿದ್ಧಾಂತವಿಲ್ಲ

Advertisements

ಜೆಡಿಎಸ್, ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, “ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಏನಾದರೂ ಮಾಡಲು ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ” ಎಂದು ಹೇಳಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿಶ್ರೇಷ್ಠತೆಯ ವ್ಯಸನ- ‘ಸನಾತನ’ ಮನಸ್ಥಿತಿಯ ವ್ಯಾಧಿ

ಜಿ20 ಸಭೆ; ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, “ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಲೋಕಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು” ಎಂದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗೆ ಮನವಿ

“ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ” ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, “ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ” ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ವಿತರಣೆ; ಕ್ರಮ ಕೈಗೊಳ್ಳಲು ತೀರ್ಮಾನ

ಚುನಾವಣೆ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X