ಕಾಂಗ್ರೆಸ್ ನಿರ್ನಾಮ ಮಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಕೆ ಎಸ್‌ ಈಶ್ವರಪ್ಪ

Date:

Advertisements
  • ‘ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ನಾವು ಗೆಲ್ಲಲಿದ್ದೇವೆ’
  • ‘ಲೋಕಸಭಾ ಚುನಾವಣೆ ಎಂದರೆ ದೇಶ ಉಳಿಸುವ ಚುನಾವಣೆ’

ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಿ, ಕಾಂಗ್ರೆಸ್ ನಿರ್ನಾಮ ಮಾಡಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಹಿಂದೆ ಕಾಂಗ್ರೆಸ್ ವಿರೋಧಿ ಮತಗಳು ವಿಭಜನೆಯಾಗಿ ಕಾಂಗ್ರೆಸ್ ಲಾಭ ಗಳಿಸಿತ್ತು. ಜೊತೆಗೆ ಕಳೆದ ಚುನಾವಣೆ ವೇಳೆ ರಾಜ್ಯದಲ್ಲಿ ಒಂದು ಸ್ಥಾನ ಸಹ ಗೆದ್ದಿತ್ತು. ಈ ಬಾರಿ 1 ಸ್ಥಾನ ಕೂಡ ಕಾಂಗ್ರೆಸ್‌ಗೆ ಹೋಗಬಾರದು ಎಂದು ತೀರ್ಮಾನ ಮಾಡಿದ್ದು, ರಾಜ್ಯದಲ್ಲಿ 28ಕ್ಕೆ 28 ಸ್ಥಾನ ನಾವು ಗೆಲ್ಲಲಿದ್ದೇವೆ” ಎಂದರು.

“ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮೂಲಕ ಒಟ್ಟಾಗಿ ಹೋಗುತ್ತೇವೆ. ಲೋಕಸಭಾ ಚುನಾವಣೆ ತಾ.ಪಂ, ಗ್ರಾ.ಪಂ, ಚುನಾವಣೆಯಂತಲ್ಲ. ಲೋಕಸಭಾ ಚುನಾವಣೆ ಅಂದರೆ ದೇಶವನ್ನು ಉಳಿಸುವ ಚುನಾವಣೆ. ಬಿಜೆಪಿ-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿ, ಯಶಸ್ಸು ಗಳಿಸುತ್ತೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

ಲೋಕಸಭೆಯಲ್ಲಿ ಒಂದು ಸ್ಥಾನವನ್ನು ಕೂಡ ಕಾಂಗ್ರೆಸ್‌ಗೆ ಕೊಡಬಾರದು ಎಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಬಿಜೆಪಿ ಎರಡು ಸೀಟು ಕೂಡ ಬರಲ್ಲ ಅಂತ ಹೇಳಿಕೆ ನೀಡಿದ್ದರು. ಕಾಂಗ್ರೆಸ್‌ಗೆ ಒಂದೇ ಸೀಟು ಬಂದಿತ್ತು. ಬಿಜೆಪಿ 25 ಸೀಟು ಗೆದ್ದಿತ್ತು. ಕಾಂಗ್ರೆಸ್ ವ್ಯಕ್ತಿಗತ ಯೋಚಿಸಿದರೆ, ನಾವು ದೇಶಕ್ಕಾಗಿ ಯೋಚಿಸುತ್ತೇವೆ” ಎಂದರು.

ಪಕ್ಷದಿಂದ ಹೊರ ಹೋಗುವವರ ವಿಚಾರವಾಗಿ ಪ್ರತಿಕ್ರಿಯಿಸಿ, “ಸೂಕ್ತ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕೆಲವರು ಪಕ್ಷ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಒಂದು ಕೋಟಿ ಸದಸ್ಯರಿದ್ದಾರೆ. ಎಲ್ಲರೂ ನಿಷ್ಠಾವಂತ ಕಾರ್ಯಕರ್ತರು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X