ನಿರುದ್ಯೋಗಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

Date:

Advertisements
  • ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ
  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023

2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಬೆಂಗಳೂರಿನಲ್ಲಿ ಸ್ಟೈಪೆಂಡ್ ಮೂಲಕ ಊಟ -ವಸತಿಯೊಂದಿಗೆ ವಿವಿಧ ಕ್ಷೇತ್ರಗಳ ಕೌಶಲ್ಯಗಳ ತರಬೇತಿಯನ್ನು, ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗಳನ್ನು ಪಡೆಯಲು ಆಸಕ್ತಿ ಇರುವವರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಈ ತರಬೇತಿಗಳನ್ನು ಪಡೆಯಲು ಅರ್ಹರಾಗಿದ್ದಾರೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ಅಭ್ಯರ್ಥಿಯ ಕುಟುಂಬ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಿರಬಾರದು.
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಾಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಇದನ್ನು ಓದಿದ್ದೀರಾ? ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಇಲಾಖೆಯ https://dom.karnataka.gov.in ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

Minority Dept

ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್‌, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವೈಯಕ್ತಿಕ ವಿವರಗಳು ಬೇಕಾಗುತ್ತವೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಇತರೆ ಯಾವುದೇ ಮಾರ್ಗದ ಮೂಲಕ ಅರ್ಜಿಗೆ ಅವಕಾಶ ಇಲ್ಲ. ಆದರೆ ಹೆಚ್ಚಿನ ಮಾಹಿತಿಗಳನ್ನು ಆಯಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X