ಬೆಂಗಳೂರು ಬಂದ್ | ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರತಿಭಟನಾನಿರತರು

Date:

Advertisements

ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ನಗರದ ನಾಲ್ಕು ಭಾಗಗಳಲ್ಲಿಯೂ ಪ್ರತಿಭಟನೆ ನಡೆಸುತ್ತಿವೆ. ಎಲ್ಲೆಡೆ ಖಾಸಗಿ ವಾಹನಗಳ ಸಂಚಾರ ಬಂದ ಆಗಿದೆ. ಈ ವೇಳೆ, ರಸ್ತೆಗಿಳಿಯುವ ಆಟೋ, ಟ್ಯಾಕ್ಸಿ ಚಾಲಕರ ಮೇಲೆ ಪ್ರತಿಭಟನಾನಿರತರು ಹಲ್ಲೆ ನಡೆಸುತ್ತಿದ್ದಾರೆ. ಇದರ ಜತೆಗೆ ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ಮಾಡುತ್ತಿರುವ ಘಟನೆ ನಡೆಯುತ್ತಿದೆ.

ಬೊಮ್ಮನಹಳ್ಳಿ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾನಿರತರು ರ‍್ಯಾಪಿಡೋ ಬೈಕ್ ಬುಕ್ ಮಾಡಿ, ರ‍್ಯಾಪಿಡೋ ಬೈಕ್ ಚಾಲಕರನ್ನು ಸ್ಥಳಕ್ಕೆ ಕರೆಯಿಸಿಕೊಳ್ಳುತ್ತಿದ್ದಾರೆ. ಅವರು ಸ್ಥಳಕ್ಕೆ ಬಂದ ಬಳಿಕ ಹೆಲ್ಮೆಟ್‌ ತೆಗೆದು ಹಲ್ಲೆ ಮಾಡುತ್ತಿದ್ದಾರೆ.

ಕಾರು ಚಾಲಕನ ಮೇಲೆ ಹಲ್ಲೆ

Advertisements

ಬಾಡಿಗೆ ಹೋಗುತ್ತಿದ್ದ ಕಾರು ಚಾಲಕನನ್ನು ಹಿಡಿದು ತಡೆಯಲಾಗಿದೆ. ಬಳಿಕ ಕಾರ್ ಕೀ ಕಿತ್ತುಕೊಂಡು ಆತನ ಮೇಲೆ ಪ್ರತಿಭಟನಾನಿರತರು ಹಲ್ಲೆ ಮಾಡಿ ಥಳಿಸಿದ ಘಟನೆ ಗಾಂಧಿ ನಗರದ ಮೌರ್ಯ ಸರ್ಕಲ್ ಬಳಿ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಬಂದ್ | ರಸ್ತೆಗಿಳಿದ ವಾಹನದ ಮೇಲೆ ಕಲ್ಲು ತೂರಾಟ, ಚಾಲಕರಿಗೆ ಸನ್ಮಾನ

ಸ್ಥಳಕ್ಕೆ ಬಂದ ಪೊಲೀಸರಿಂದ ಕಾರು ಚಾಲಕನ ರಕ್ಷಣೆ ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ಫ್ಲೈಓವರ್ ಮೇಲೆ ಮತ್ತೋರ್ವ ರ‍್ಯಾಪಿಡೋ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಸಿಕ್ಕ ಸಿಕ್ಕಲ್ಲಿ ರ‍್ಯಾಪಿಡೋ ಚಾಲಕರ ಮೇಲೆ ಪ್ರತಿಭಟನಾನಿರತರು ಹಲ್ಲೆ ಮಾಡುತ್ತಿದ್ದಾರೆ.

ಖಾಸಗಿ ಚಾಲಕರು ತಮ್ಮ ಬೇಡಿಕೆಗಳಿಗ ಈಡೇರಿಕೆಗೆ ಮಾಡುತ್ತಿರುವ ಈ ಪ್ರತಿಭಟನೆ ಹಲ್ಲೆ ಮತ್ತು ಹಿಂಸಾಚಾರಕ್ಕೆ ತಿರುಗುತ್ತಿದೆ. ರ‍್ಯಾಪಿಡೋ ಚಾಲಕರನ್ನು ತಾವೇ ಬುಕ್ ಮಾಡಿ ಕರೆಸಿ ಥಳಿಸುವಂತಹ ಘಟನೆಗಳು ನಗರದಲ್ಲಿ ವರದಿಯಾಗುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X