ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

Date:

Advertisements
  • ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
  • ಬರಗಾಲ: 62 ತಾಲ್ಲೂಕುಗಳು ಗುರುತಿಸಲಾಗಿದೆ: ಸಿಎಂ

ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ. ಜೆಡಿಎಸ್‌ನವರು ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಸೋಮವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದರು.

“ಬರ ಮಾರ್ಗಸೂಚಿಯೊಳಗೆ 62 ತಾಲ್ಲೂಕುಗಳನ್ನು ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

Advertisements

ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್‌ಎಸ್‌ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಪ್ರಧಾನಿ ಭೇಟಿಗೆ ಸಮಯ ನಿಗದಿಪಡಿಸಲಿ

“ಕೇಂದ್ರ ಸರ್ಕಾರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನ ಮಂತ್ರಿಗಳ ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು, ಭೇಟಿಗೆ ಸಮಯ ನಿಗದಿಪಡಿಸಲಿ” ಎಂದು ಒತ್ತಾಯಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ

ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ, ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ” ಎಂದು ಕಿಡಿ ಕಾರಿದರು.

ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಕೆ ಅಸಾಧ್ಯ

ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಯಕೂಟದವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X