ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

Date:

Advertisements

ಜಿ20 ಶೃಂಗಸಭೆ ಈಗ ಮುಗಿದಿದ್ದು, ಮೋದಿ ಸರಕಾರವು ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರ ಹಿಂಸಾಚಾರದಂತಹ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ (ಸೆಪ್ಟೆಂಬರ್‌ 11) ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗದ ಹೆಚ್ಚಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಖರ್ಗೆ ಪಟ್ಟಿ ಮಾಡಿರುವ ವಿಷಯಗಳು

Advertisements

ಹಣದುಬ್ಬರ: ಸಾಮಾನ್ಯ ಒಂದು ಪ್ಲೇಟ್‌ ಊಟದ ಬೆಲೆ ಆಗಸ್ಟ್‌ನಲ್ಲಿ ಶೇ. 24 ರಷ್ಟು ಹೆಚ್ಚಾಗಿದೆ

ನಿರುದ್ಯೋಗ: ದೇಶದಲ್ಲಿ ನಿರುದ್ಯೋಗ ದರ ಶೇ.8 ರಷ್ಟಿದ್ದು, ಯುವಕರ ಭವಿಷ್ಯ ಮಂಕಾಗಿದೆ

ಹಗರಣಗಳು: ಮೋದಿ ಸರ್ಕಾರದ ದುರಾಡಳಿತ ಭ್ರಷ್ಟಾಚಾರಕ್ಕೆ ಕಾರಣವಾಗಿದೆ. ಸಿಎಜಿ ಹಲವಾರು ವರದಿಗಳಲ್ಲಿ ಬಿಜೆಪಿ ಸರ್ಕಾರದ ಹಗರಣಗಳನ್ನು ಬಹಿರಂಗಪಡಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 13000 ಕೋಟಿ ರೂ. ಜಲ ಜೀವನ್ ಹಗರಣ ಬೆಳಕಿಗೆ ಬಂದಿದೆ. ಇದರಲ್ಲಿ ದಲಿತ ಐಎಎಸ್ ಅಧಿಕಾರಿಯೊಬ್ಬರು ಭ್ರಷ್ಟಾಚಾರವನ್ನು ಬಯಲಿಗೆಳೆದ ಕಾರಣ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ.

ಲೂಟಿ: ಪ್ರಧಾನಿ ಆತ್ಮೀಯ ಗೆಳೆಯನ ಲೂಟಿ ಇತ್ತೀಚೆಗೆ ಮತ್ತೆ ಬೆಳಕಿಗೆ ಬಂದಿದೆ. 2019 ರ ಚುನಾವಣೆಗೆ ಮುನ್ನ ಆರ್‌ಬಿಐ ಖಜಾನೆಯಿಂದ ಮೋದಿ ಸರ್ಕಾರಕ್ಕೆ 3 ಲಕ್ಷ ಕೋಟಿ ರೂಪಾಯಿ ವರ್ಗಾಯಿಸುವಂತೆ ಸರ್ಕಾರದ ಒತ್ತಡವನ್ನು ಆರ್‌ಬಿಐ ಮಾಜಿ ಡೆಪ್ಯೂಟಿ ಗವರ್ನರ್ ವಿರಳ್ ಆಚಾರ್ಯ ವಿರೋಧಿಸಿದ್ದರು ಎಂಬುದು ಈಗ ಬಹಿರಂಗವಾಗಿದೆ.

ದುರಂತ: ಕಳೆದ ಕೆಲ ದಿನಗಳಿಂದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ವಿಪತ್ತು ಸಂಭವಿಸಿದ್ದು, ಆದರೆ ದುರಹಂಕಾರಿ ಮೋದಿ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದನ್ನು ತಪ್ಪಿಸುತ್ತಿದೆ. ಇದೆಲ್ಲದರ ನಡುವೆ ಮೋದಿಯವರು ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? 5 ರಾಜ್ಯಗಳ ಚುನಾವಣೆಯನ್ನು ಮುಂದೂಡುವುದೇ ‘ಒಂದು ರಾಷ್ಟ್ರ ಒಂದು ಚುನಾವಣೆ’ ಗುರಿ: ಪ್ರಶಾಂತ್ ಭೂಷಣ್

ಆದರೆ ಸಾರ್ವಜನಿಕರು ಮೋದಿ ಸರ್ಕಾರದ ಗಮನ ಬೇರೆಡೆ ಸೆಳೆಯುವ ಸಮಸ್ಯೆಗಳ ಬದಲಿಗೆ ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತಾರೆ.

ಅಲ್ಲದೆ 2024 ರಲ್ಲಿ ನಿಮ್ಮ ನಿರ್ಗಮನಕ್ಕೆ ದೇಶದ ನಾಗರಿಕರು ದಾರಿ ಮಾಡಿಕೊಡಲು ಪ್ರಾರಂಭಿಸಿದ್ದಾರೆ ಎಂಬುದನ್ನು ಮೋದಿ ಸರ್ಕಾರ ಎಚ್ಚರಿಕೆಯಿಂದ ಆಲಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X