ಮಣಿಪುರ | ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡುವ ನಿರ್ಣಯಕ್ಕೆ 23 ಬಿಜೆಪಿ ಶಾಸಕರ ಸಹಿ

Date:

Advertisements

ಹಿಂಸಾಪೀಡಿತ ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಆಡಳಿತಾರೂಢ ಬಿಜೆಪಿಯ 23 ಶಾಸಕರು ಪ್ರತಿಜ್ಞೆ ಮಾಡಿದ್ದು, ಈ ಕುರಿತ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.

“ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಗಾಗಿ ನಾವು ನಿಲ್ಲುತ್ತೇವೆ ಮತ್ತು ಯಾವುದೇ ರೀತಿಯ ಪ್ರತ್ಯೇಕ ಆಡಳಿತವನ್ನು ನಾವು ಒಪ್ಪುವುದಿಲ್ಲ ಎಂದು ಶಾಸಕಾಂಗ ಸಭೆಯ ಎಲ್ಲಾ ಕೆಳಗಿರುವ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ” ಎಂದು ನಿರ್ಣಯವನ್ನು ಓದಲಾಗಿದೆ.

ಗಮನಾರ್ಹ ಅಂಶವೆಂದರೆ, ಮುಖ್ಯಮಂತ್ರಿ ಬಿರೇನ್‌ಸಿಂಗ್ ಈ ನಿರ್ಣಯಕ್ಕೆ ಸಹಿ ಹಾಕಿಲ್ಲ.

Advertisements

ಪ್ರಸ್ತುತ ಬಿಕ್ಕಟ್ಟಿಗೆ ಶೀಘ್ರವೇ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ನಾಯಕತ್ವದ ಮನವೊಲಿಸಲು ಶೀಘ್ರದಲ್ಲೇ ದೆಹಲಿಗೆ ತೆರಳಲು ಶಾಸಕರು ನಿರ್ಧರಿಸಿದ್ದಾರೆ.

ಸೋಮವಾರ ರಾತ್ರಿ ಸಿಎಂ ಕಾರ್ಯಾಲಯದಲ್ಲಿ ಹೊಸದಾಗಿ ರೂಪುಗೊಂಡ ಮಣಿಪುರದ ಯೂತ್ ಸಿವಿಲ್ ಸೊಸೈಟಿ ಸಂಘಟನೆಯ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ ಸಹಿ ಮಾಡಿದವರು, ಪ್ರತ್ಯೇಕ ಆಡಳಿತದ ಕುಕಿ ಝೋ ಸಮುದಾಯದ ಬೇಡಿಕೆಯು ತಮಗೆ ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ: ʼಈ ದಿನʼ ವಿಶೇಷ ಸಂದರ್ಶನ ಭಾಗ-1 | ‘ಮಣಿಪುರವನ್ನು ಒಡೆದರೆ, ನಾವು ಭಾರತವನ್ನೇ ಒಡೆಯುತ್ತೇವೆ’- ತೌನೋಜಮ್ ಬೃಂದಾ

ಸೋಮವಾರ ರಾತ್ರಿ, ಮಣಿಪುರದ ಸಾವಿರಾರು ಯುವಕರು ಅವರನ್ನು ಭೇಟಿ ಮಾಡಲು ಸಿಎಂ ಬಂಗಲೆಯ ಕಡೆಗೆ ಮೆರವಣಿಗೆ ನಡೆಸಿದರು. ಆದರೆ ಭದ್ರತಾ ಪಡೆಗಳು ಅವರಲ್ಲಿ ಕೆಲವರಿಗೆ ಮಾತ್ರ ಬ್ಯಾರಿಕೇಡ್‌ಗಳನ್ನು ದಾಟಲು ಅವಕಾಶ ಮಾಡಿಕೊಟ್ಟವು.

ಮಣಿಪುರದಲ್ಲಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ನೀಡಬೇಕೆಂದು ಆಗ್ರಹಿಸಿದ 10 ಮಂದಿ ಕುಕಿ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಜತೆಗಿನ ಸಭೆಯಲ್ಲಿ ಯೂತ್ ಸಿವಿಲ್ ಸೊಸೈಟಿ ಸಂಘಟನೆಯ ಸದಸ್ಯರು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X