ಧಾರವಾಡ | ಸೆ.14ರಂದು ಕುಂದಗೋಳ ಬಂದ್‌ಗೆ ರೈತ ಸಂಘ ಕರೆ

Date:

Advertisements

ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೆಪ್ಟೆಂಬರ್ 14 ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸಂಪೂರ್ಣ ಬಂದ್‌ಗೆ ಕರ್ನಾಟಕ ರೈತ ಸಂಘ, ರೈತ ಸಂಘಗಳ ಒಕ್ಕೂಟದಿಂದ ಕರೆ ನೀಡಿದ್ದಾರೆ.

ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ ಮಾತನಾಡಿ, “ಈ ವರ್ಷದ ಮಳೆಯ ಅಭಾವದಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಮಳೆಯಾಗದೆ ಬೆಳೆ ನಾಶವಾಗಿ ರೈತರು ಗೋಳಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕುಂದಗೋಳ ತಾಲೂಕು ಬಂದ್‌ಗೆ ಕರೆ ನೀಡಲಾಗುತ್ತಿದೆ” ಎಂದು ಈ ದಿನ.ಕಾಮ್‌ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ಅಗತ್ಯತೆ ಈಡೇರಿಕೆಗೆ ಸೆ.25ರಂದು ರಾಜ್ಯಾದ್ಯಂತ ಧರಣಿ

Advertisements

“ಈ ಕುರಿತು ಹಲವು ಬಾರಿ ಮನವಿ ಮಾಡಿಕೊಂಡರೂ ಏನೂ ಪ್ರಯೋಜನವಾಗಿಲ್ಲ. ಹಿಂದಿನ ಸರ್ಕಾರ ಇದ್ದಾಗಿನಿಂದಲೂ ರೈತರ ಗೋಳು ಕೇಳುವವರಿಲ್ಲ. ಈ ಸಲ ರೈತರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದಲ್ಲಿ ಧರಣಿ ಸತ್ಯಾಗ್ರಹ ಮಾಡಲು ಅಣಿಯಾಗಬೇಕಾಗುತ್ತದೆ. ರೈತರ ಸಾಲಮನ್ನಾ, ಕುಂದಗೋಳ ತಾಲೂಕು ಬರಪೀಡಿತ ತಾಲೂಕನ್ನಾಗಿ ಘೋಷಿಸುವುದು, ರೈತರ ಬೆಳೆ ವಿಮೆ ಪರಿಹಾರ ನೀಡುವುದು, ನಾಶವಾದ ಬೆಳೆಗೆ ಪರಿಹಾರ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಬಂದ್‌ಗೆ ಕರೆ ನೀಡಿದ್ದೇವೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ...

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ...

ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ...

Download Eedina App Android / iOS

X