ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಬೇಕೆಂಬ ಬಿಜೆಪಿಗೆ ಭಕ್ತಿಯಲ್ಲ, ಭಯೋತ್ಪಾದಕ ಮನಸ್ಥಿತಿ ಇದೆ: ಭಾಸ್ಕರ್ ಪ್ರಸಾದ್

Date:

Advertisements

ಅನುಮತಿ ದೊರೆತರೂ, ದೊರೆಯದಿದ್ದರೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದವರಿಗೆ ಭಕ್ತಿಯಿಲ್ಲ. ಭಯೋತ್ಪಾದಕ ಮನಸ್ಥಿತಿ ಇದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಕೂರಿಸುತ್ತೇವೆಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿ ಭಾಸ್ಕರ್‌ ಪ್ರಸಾದ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಬಿಜೆಪಿ ಮತ್ತು ಸಂಘ ಪರಿವಾರ ಸಮಾಜದಲ್ಲಿ ಗಲಭೆಗಳನ್ನು ಸೃಷ್ಟಿ ಮಾಡಲು ಅವಕಾಶಗಳಿಗಾಗಿ ನಿರಂತರ ತಡಕಾಟದಲ್ಲಿ ತೊಡಗಿರುತ್ತವೆ. ಅದರ ಭಾಗವಾಗಿ ಇದ್ಗಾ ಮೈದಾನಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಪಟ್ಟು ಹಿಡಿಯುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅದರಲ್ಲೂ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿನಿಂದಲೂ ಇವರ ದ್ವೇಷ ರಾಜಕಾರಣಕ್ಕೆ ಸಾಕ್ಷಿಯಾಗುತ್ತ ಬಂದಿದೆ. ಮುಸ್ಲಿಮರನ್ನು ವಿಲನ್ ಮಾಡಲು ಈ ಹಿಂದುತ್ವ ಪಡೆಗಳು ಪಾಕ್ ಧ್ವಜ ಹಾರಿಸುವ, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣ ಮಾಡುವ ನೀಚ ಕಾರ್ಯಗಳನ್ನು ನಡೆಸಿರುವ ಉದಾಹರಣೆಗಳು ಸಾಕಷ್ಟಿವೆ” ಎಂದು ಕಿಡಿಕಾರಿದ್ದಾರೆ.

“ಅನುಮತಿ ನೀಡದಿದ್ದರೂ ಹುಬ್ಬಳ್ಳಿ ಇದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತಿರುತ್ತೇವೆ ಎಂಬ ಬಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ನೆಲದ ಕಾನೂನು ಧಿಕ್ಕರಿಸುವ ಮಾತುಗಳನ್ನಾಡಿದ್ದಾರೆ. ಬಿಜೆಪಿಯ ದ್ವೇಷದ ತಂತ್ರಗಳಿಗೆ ಸರ್ಕಾರ ಸೊಪ್ಪು ಹಾಕಬಾರದು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಾವುದೇ ಕಾರಣಕ್ಕೂ ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ...

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ...

ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ...

Download Eedina App Android / iOS

X