ಸಾರಿಗೆ ಇಲಾಖೆ | 13,000 ಸಿಬ್ಬಂದಿ ನೇಮಕ ಶೀಘ್ರ: ಸಚಿವ ರಾಮಲಿಂಗಾರೆಡ್ಡಿ

Date:

Advertisements
  • ಕೆಂಗೇರಿ ಉಪನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅಭಿಮತ
  • ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ, ಕಾನೂನು ಕ್ರಮದ ಎಚ್ಚರಿಕೆ

ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 13,000 ಸಿಬ್ಬಂದಿ ನೇಮಕವನ್ನು ಶೀಘ್ರ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಉದ್ಯೋಗ ತುಂಬಿಕೊಳ್ಳುವ ಭರವಸೆ ನೀಡಿದರು.

ಖಾಸಗಿ ಬಸ್​​ಗಳಿಂದ ಹೆಚ್ಚಿನ ದರ ವಸೂಲಿ ವಿಚಾರವಾಗಿ ಮಾತನಾಡಿ, “ಗೌರಿ ಗಣೇಶ ಹಬ್ಬಕ್ಕೆ ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ‌ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್​​ಗಳನ್ನು ಬಿಡಲು ನಿರ್ಧರಿಸಿದ್ದೇವೆ” ಎಂದರು.

Advertisements

“ಶಾಸಕ ಎಸ್ ಟಿ ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ” ಎಂದು ಇದೇ ವೇಳೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚೈತ್ರಾ ಕುಂದಾಪುರ ಪ್ರಕರಣ | ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಬಂಧನ ಆಗಲಿ: ಬೊಮ್ಮಾಯಿ

ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಎಸ್ ಟಿ ಸೋಮಶೇಖರ್​ ಪ್ರತಿಕ್ರಿಯಿಸಿ, “ಭಾರತೀಯ ಜನತಾ ಪಕ್ಷದಲ್ಲೇ ಇನ್ನೂ ಇದ್ದೇನೆ. ನಾನು ಸೈಲೆಂಟ್ ಆಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗುವ ಯೋಚನೆ ಇಲ್ಲ. ರಾಮಲಿಂಗಾರೆಡ್ಡಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದು ತಿಳಿಸಿದರು.

“ಬಸ್ ನಿಲ್ದಾಣಗಳ ಸಮಸ್ಯೆ ಬಗ್ಗೆ ಹೇಳಲು ಸಚಿವರನ್ನು ಕರೆಸಿದ್ದೆವು. ಸಾರಿಗೆ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಜನವರಿಗೆ ಕೆಂಗೇರಿ ಟಿಟಿಎಂಸಿ ಉದ್ಘಾಟನೆ ಮಾಡೋಣ ಎಂದಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X