ಆಗ‌ಸ್ಟ್‌ನಲ್ಲಿ ಇರದ ದಾರಿದ್ರ್ಯ ಸೆಪ್ಟೆಂಬರ್‌ನಲ್ಲಿ ಬಂದಿದ್ದು ಯಾರಿಗೆ: ಕಾಂಗ್ರೆಸ್‌ ಲೇವಡಿ

Date:

Advertisements

ಆಗ‌ಸ್ಟ್‌ನಲ್ಲಿ ಇರದ ದಾರಿದ್ರ್ಯ ಸೆಪ್ಟೆಂಬರ್‌ನಲ್ಲಿ ಬಂದಿದ್ದು ಯಾರಿಗೆ, ಜೆಡಿ‌ಎಸ್‌ಗೋ? ಅಥವಾ ಬಿಜೆಪಿಗೋ? ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣದ ಎಕ್ಸ್‌ (ಟ್ವಿಟ್ಟರ್)ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕುಟುಕಿರುವ ಕಾಂಗ್ರೆಸ್‌, “ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ ಎಂದು ಕುಮಾರಸ್ವಾಮಿ ಮೊದಲು ಹೇಳಿದ್ದರು. ಕುಮಾರಸ್ವಾಮಿಯೊಂದಿಗೆ ಹೋಗುವ ದಾರಿದ್ರ್ಯ ಬಿಜೆಪಿಗೆ ಬಂದಿಲ್ಲ ಎಂದು ಸುನಿಲ್ ಕುಮಾರ್ ನಂತರ ಹೇಳಿದ್ದರು. ಇಂತಹ ಯೂಟರ್ನ್ ಗಳಿಂದಲೇ ಉಭಯ ಪಕ್ಷಗಳನ್ನು ರಾಜ್ಯದ ಜನತೆ ನಂಬಿಕೆಗೆ ಅರ್ಹವಲ್ಲ ಎಂದು ತೀರ್ಮಾನಿಸಿ ಹೀನಾಯವಾಗಿ ತಿರಸ್ಕರಿಸಿದೆ. ದಾರಿದ್ರ್ಯ ಬಂದಿದ್ದು ಯಾರಿಗೆ ಎಂಬುದನ್ನು ಉಭಯ ಪಕ್ಷಗಳೂ ಅವಲೋಕನ ನಡೆಸಿ ರಾಜ್ಯದ ಜನತೆಗೆ ತಿಳಿಸಲಿ!” ಎಂದಿದೆ.

“ಜೆಡಿಎಸ್‌ನವರು ವಚನ ಭ್ರಷ್ಟರು, ಜೀವಮಾನದಲ್ಲಿ ಅವರ ಸಹವಾಸ ಮಾಡುವುದಿಲ್ಲ ಎನ್ನುತ್ತಿದ್ದ ಯಡಿಯೂರಪ್ಪವರು ಜೆಡಿಎಸ್ ಜೊತೆಗಿನ ಸಖ್ಯ ಬೆಳೆಸುವ ಮಾತಾಡಿದ್ದರು, ಈಗ ಮತ್ತೆ ಯೂಟರ್ನ್ ಹೊಡೆದಿದ್ದಾರೆ. ಮೈತ್ರಿಯ ಚೌಕಸಿ ವ್ಯವಹಾರ ಕುದುರಲಿಲ್ಲವೇ ಅಥವಾ ಯಡಿಯೂರಪ್ಪನವರನ್ನು ಕಟ್ಟಿಹಾಕಲು ಬಿಜೆಪಿ ಈ ಕಡಿವಾಣ ಹಾಕುತ್ತಿದೆಯಾ” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X