ಹೆಣ ಕಂಡರೆ ಬೊಬ್ಬೆ ಹೊಡೆಯುವ ಬಿಜೆಪಿ, ಕಾರ್ಯಕರ್ತರು ಅಕ್ರಮ ನಡೆಸಿದಾಗ ಜಾರಿಕೊಳ್ಳುವುದೇಕೆ? ಕಾಂಗ್ರೆಸ್

Date:

Advertisements
  • ವಂಚನೆ ಪ್ರಕರಣದ ಎ1 ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆ ಎಂದ ಕಾಂಗ್ರೆಸ್
  • ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಬಿಜೆಪಿಯವರ ಆತ್ಮವಂಚನೆ ಅಲ್ಲವೇ?

ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, ಬೊಮ್ಮಾಯಿಯವರು ಟಿಕೆಟ್ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದಿದ್ದಾರೆ. ಯಾವುದಾದರೂ ಹೆಣ ಕಂಡರೆ ಹಿಂದೂ ಕಾರ್ಯಕರ್ತರು ಎಂದು ಬೊಬ್ಬೆ ಹೊಡೆಯುವ ಬಿಜೆಪಿ, ತನ್ನ ಕಾರ್ಯಕರ್ತರು ಅಕ್ರಮ, ಅನಾಚಾರ ನಡೆಸಿದಾಗ ಜಾರಿಕೊಳ್ಳುವುದೇಕೆ? ಎಂದು ಬಿಜೆಪಿಗೆ ಪ್ರಶ್ನೆ ಹಾಕಿದೆ.

ಆರೋಪಿ ಚೈನ್ ಚೈತ್ರ ಎಬಿವಿಪಿ ಕಾರ್ಯಕರ್ತೆಯಾಗಿದ್ದಾಳೆ. ಮತ್ತೊಬ್ಬ ಆರೋಪಿ ಗಗನ್ ಕಡೂರು ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ. ವಂಚನೆ ನಡೆಸಿದ್ದು ಬಿಜೆಪಿ ಟಿಕೆಟ್ ಹೆಸರಲ್ಲಿ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಡೀಲ್ ನಡೆಸಲು ಬಳಸಿಕೊಳ್ಳಲಾಗಿತ್ತು ಎಂದಿರುವ ಕಾಂಗ್ರೆಸ್, ಹೀಗಿದ್ದೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳುವುದು ಬಿಜೆಪಿಯವರ ಆತ್ಮವಂಚನೆ ಅಲ್ಲವೇ ಎಂದು ಕಾಲೆಳೆದಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X