ವರದಿಯಲ್ಲಿನ ಸುಳ್ಳು ಹೇಳಿಕೆ ಅಪರಾಧವಲ್ಲ: ಎಡಿಟರ್ಸ್ ಗಿಲ್ಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿಕೆ

Date:

Advertisements

ಮಣಿಪುರ ಹಿಂಸಾಚಾರದ ಸತ್ಯಶೋಧನಾ ವರದಿಯನ್ನು ಪ್ರಕಟಿಸಿದ್ದಕ್ಕಾಗಿ ದಾಖಲಾಗಿರುವ ಎಫ್‌ಐಆರ್‌ನಿಂದ ಎಡಿಟರ್ಸ್ ಗಿಲ್ಡ್ ನ ನಾಲ್ವರು ಸದಸ್ಯರಿಗೆ ಬಂಧನದಿಂದ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ಎರಡು ವಾರದವರೆಗೆ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

“ವರದಿಯಲ್ಲಿ ಸುಳ್ಳು ಹೇಳಿಕೆ ನೀಡುವುದು 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಪರಾಧವಲ್ಲ, ಅದು ತಪ್ಪು ಹೇಳಿಕೆಗಳಾಗಿರಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ದೇಶದಾದ್ಯಂತ ಪತ್ರಕರ್ತರು ತಪ್ಪು ಹೇಳಿಕೆಗಳನ್ನು ನೀಡುತ್ತಾರೆ, ನೀವು ಎಲ್ಲರನ್ನೂ ವಿಚಾರಣೆಗೆ ಒಳಪಡಿಸುತ್ತೀರಾ?” ಎಂದು ನ್ಯಾಯಾಲಯ ಕೇಳಿದೆ.

Advertisements

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು, ಮೇಲ್ನೋಟಕ್ಕೆ ತೋರುವಂತೆ, ಪತ್ರಕರ್ತರ ವಿರುದ್ಧ ಯಾವುದೇ ಅಪರಾಧಗಳನ್ನು ಮಾಡಲಾಗಿಲ್ಲ. ನಾಲ್ವರು ಪತ್ರಕರ್ತರ ವಿರುದ್ಧದ ಎಫ್‌ಐಆರ್‌ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’ ಪ್ರಾರಂಭ

“ಪತ್ರಕರ್ತರು ವಿಷಯವನ್ನು ಪ್ರಸ್ತುತಪಡಿಸಲು ಮಾತ್ರ ಮುಂದಾಗಿದ್ದಾರೆ. ಈ ಅಪರಾಧಗಳನ್ನು (ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿದಂತೆ) ಹೇಗೆ ಮಾಡಲಾಗಿದೆ ಎಂಬುದನ್ನು ನಮಗೆ ತೋರಿಸಿ. ಇದು ಕೇವಲ ವರದಿಯಾಗಿದೆ. ನೀವು ಅಪರಾಧಗಳನ್ನು ಮಾಡದಿರುವ ಸೆಕ್ಷನ್‌ಗಳನ್ನು ಸೇರಿಸಿದ್ದೀರಿ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶುಕ್ರವಾರ ನಾಲ್ಕು ಎಡಿಟರ್ಸ್ ಗಿಲ್ಡ್ ಸದಸ್ಯರಿಗೆ ಇನ್ನೂ ಎರಡು ವಾರಗಳವರೆಗೆ ಬಂಧನದಿಂದ ರಕ್ಷಣೆಯನ್ನು ವಿಸ್ತರಿಸಿದೆ.

ಸ್ಥಳೀಯ ಮತ್ತು ರಾಷ್ಟ್ರೀಯ ಮಾಧ್ಯಮಗಳಿಂದ ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಗಳ ಬಗ್ಗೆ ಎಡಿಟರ್ಸ್‌ ಗಿಲ್ಡ್ ಕಳೆದ ತಿಂಗಳು ಮೂವರು ಹಿರಿಯ ಪತ್ರಕರ್ತರನ್ನು ಒಳಗೊಂಡ ಸತ್ಯಶೋಧನಾ ತಂಡವನ್ನು ಸ್ಥಾಪಿಸಿತ್ತು. ಸತ್ಯಶೋಧನಾ ತಂಡವು ಮಣಿಪುರ ಮತ್ತು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ವರದಿಯನ್ನು ಸಿದ್ಧಪಡಿಸಿತ್ತು. ಅದು ಸೆಪ್ಟೆಂಬರ್ 2 ರಂದು ಪ್ರಕಟವಾಯಿತು.

ಎಡಿಟರ್ಸ್‌ ಗಿಲ್ಡ್ ನೀಡಿದ ತಪ್ಪಾದ ವರದಿ, ತಪ್ಪು ಸಂಗತಿಗಳು ಮತ್ತು ನಕಲಿ ಸುದ್ದಿಗಳ ಮೂಲಕ ರಾಜ್ಯದಲ್ಲಿ ಹಿಂಸಾಚಾರದ ಜ್ವಾಲೆ ಮತ್ತಷ್ಟು ಹೆಚ್ಚಾಯಿತು ಎಂದು ಮಣಿಪುರ ಸರ್ಕಾರ ಆರೋಪಿಸಿದೆ.

ಅಲ್ಲದೆ ನಾಲ್ವರು ಎಡಿಟರ್ಸ್ ಗಿಲ್ಡ್ ಸದಸ್ಯರ ವಿರುದ್ಧ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X